Home / ಬಾಲ ಚಿಲುಮೆ / ಕವಿತೆ / ದಶಾವತಾರ ಮತ್ತು ಜೀವ ವಿಕಾಸ

ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...