Home / ಬಾಲ ಚಿಲುಮೆ / ಕವಿತೆ / ದಶಾವತಾರ ಮತ್ತು ಜೀವ ವಿಕಾಸ

ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...