ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆನ್ನೆಯರಿಗೆ ನೀಡಿ ಚೆನ್ನೆಮಣೆ
Next post ವಿಚಾರ ಸಾಹಿತ್ಯ : ಇವತ್ತಿನ ಮುನ್ನೋಟ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys