ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆನ್ನೆಯರಿಗೆ ನೀಡಿ ಚೆನ್ನೆಮಣೆ
Next post ವಿಚಾರ ಸಾಹಿತ್ಯ : ಇವತ್ತಿನ ಮುನ್ನೋಟ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…