Home / ಬಾಲ ಚಿಲುಮೆ / ಕವಿತೆ / ದಶಾವತಾರ ಮತ್ತು ಜೀವ ವಿಕಾಸ

ದಶಾವತಾರ ಮತ್ತು ಜೀವ ವಿಕಾಸ

ದೇವರ ದೇವನು ಮಹಾವಿಷ್ಣುವು
ದಶಾವತಾರವ ತಾಳಿದನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಲೋಕಕಲ್ಯಾಣವ ಮಾಡಿದನು-
ಹಿಂದಿನಿಂದಲೂ ಕೇಳುತಲಿರುವೆವು
ದಶಾವತಾರದ ಕಥೆಯನ್ನು
ಇಂದು ಬೇರೆಯೇ ರೀತಿಯೊಳರಿಯುವ
ಕಥೆಯಲಿ ಅಡಗಿದ ತತ್ವವನು!

ಮೊದಲಿಗೆ ಪ್ರಳಯವು ಘಟಿಸಿದ ಸಮಯದಿ
‘ಮತ್ಸ್ಯಾ’ವತಾರವ ತಾಳಿದ್ದು
ಸಮುದ್ರ ಮಥನವು ನಡೆಯುವ ವೇಳೆ
‘ಕೂರ್ಮಾ’ವತಾರವ ತಳೆದದ್ದು
ರಕ್ಕಸನಿಂದಲಿ ಭೂಮಿಯ ರಕ್ಷಿಸೆ
‘ವರಾಹ’ ರೂಪವ ಹೊಂದಿದ್ದು
ವಿಷ್ಣುಭಕ್ತ ಪ್ರಹ್ಲಾದನ ಉಳಿಸಲು
‘ನರಸಿಂಹ’ನು ತಾನಾಗಿದ್ದು
ಬಲಿಯನು ಪಾತಾಳದ ಕಡೆ ತುಳಿಯಲು
’ವಾಮನ’ ರೂಪವ ಧರಿಸಿದ್ದು

ಕಾರ್ತವೀರ್ಯನ ಮದವನು ಅಡಗಿಸಿ
‘ಪರಶುರಾಮ’ ತಾನೆನಿಸಿದ್ದು
ಪಿತೃವಾಕ್ಯ ಪರಿಪಾಲನೆ ಮಾಡಲು
‘ರಾಮ’ನಾಗಿ ಅವತರಿಸಿದ್ದು
ಕುರುಪಾಂಡವ ಸಂಗ್ರಾಮವ ನಡೆಸಿದ
‘ಕೃಷ್ಣ’ಪರಮಾತ್ಮನಾಗಿದ್ದು
ಆಸೆಯು ದುಃಖಕೆ ಮೂಲವು ಎನ್ನುತ
ತಿಳಿಸಲು ’ಬುದ್ಧ’ನು ಜನಿಸಿದ್ದು
ಅಧರ್ಮ ಅಳಿಸುತ ಧರ್ಮವ ಉಳಿಸಲು
‘ಕಲ್ಕಿ’ಯಾಗಿ ಅವತರಿಸುವುದು

ಹೀಗೆ ಹತ್ತು ಅವತಾರವು ಇರುವುವು
ಪುರಾಣದಲ್ಲಿನ ಕಥೆಗಳಲಿ
ಭಕ್ತಿಯಿಂದ ಮನೆಮಾಡಿಕೊಂಡಿಹವು
ನಂಬಿಕೊಂಡವರ ಎದೆಯಲ್ಲಿ!
ಮತ್ಸ್ಯ ನೀರಿನಲಿ ಮಾತ್ರ ಬದುಕುವುದು
ಮೊದಲ ಜೀವಿ ಈ ಸೃಷ್ಟಿಯಲಿ
ಕೂರ್ಮ ನೀರಿನಲಿ ಮತ್ತು ನೆಲದಲ್ಲಿ
ಬದುಕುವುದೆರಡೂ ಕಡೆಯಲ್ಲಿ
ವರಾಹ ನೆಲದಲಿ ಮಾತ್ರ ಬದುಕುವುದು
ಉಳಿಯಲಾರದದು ನೀರಿನಲಿ
ಅರ್ಧ ಪ್ರಾಣಿ ಇನ್ನರ್ಧ ಮಾನವನ
ರೂಪ ನರಸಿಂಹ ಕಂಭದಲಿ
ವಾಮನನೆಂದರೆ ಕುಬ್ಜ ದೇಹದವ
ಪೂರ್ಣ ಬೆಳೆದಿರದ ಮಾನವನು
ಪರಶುರಾಮನವ ಪೂರ್ಣನಾದರೂ
ರಾಗದ್ವೇಷದಲಿ ಉಳಿದವನು
ಮರ್ಯಾದಾಪುರುಷೋತ್ತಮನೆನಿಸಿದ
ರಾಮ ಪರಿಪೂರ್ಣನಾದವನು
ದುಷ್ಟರ ಶಿಕ್ಷಿಸಿ ಶಿಷ್ಟರ ರಕ್ಷಿಸಿ
ಕೃಷ್ಣಪರಮಾತ್ಮನೆನಿಸಿದನು
ಮಾನವನಾಸೆಗೆ ದುರಾಸೆ ಮನಸಿಗೆ
ಬುದ್ಧನು ಅಂತ್ಯವ ಹಾಡಿದನು
ಕುದುರೆಯೇರಿ ಖಡ್ಗವ ಝಳಪಿಸುತಲಿ
ಬರುವನೆನ್ನುವರು ಕಲ್ಕಿಯನು!

ಹತ್ತು ಅವತಾರ ಕ್ರಮದಲಿ ನೋಡಲು ಜೀವಿಕಾಸವು ಕಾಣುವುದು
ಜೀವಿ ನೀರಿನಲಿ ಹುಟ್ಟಿದ ನಂತರ ಬೆಳೆದು ಬಂದುದನು ತಿಳಿಸುವುದು
ಮೊದಲಿಗೆ ಜೀವಿಯು ನೀರಲಿ ಹುಟ್ಟಿತು
ನಂತರ ನೆಲದೆಡೆ ಬಂದಿತ್ತು
ಪ್ರಾಣಿ ಹಂತದಿಂದೇರುತ ಬಂದಿತು
ಮಾನವ ರೂಪವ ಹೊಂದಿತ್ತು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...