ಕಲಿಯುಗಾ ಬಂತು

ಕಲಿಯುಗಾ ಬಂತು

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ ಕೂಗಿ ಹೇಳುತ್ತಲಿದ್ದಾರೆ.)

ನಾ ಏನ್ ಹೇಳಿದೆ ನಿಮಗ..! ಈ ಲಂಡ… ಮಕ್ಕಳಿಗೆ ಮಡೀ ಇಲ್ಲಾ… ಮೈಲಿಗಿ ಇಲ್ಲಾ! ದಶಮೀ ಕಟಿಗೊಂಡು ಫಿರತೀಮ್ಯಾಲೆ ಹೋಗೂ ಮಾಮಲೇದಾರನ್ನ ಎಂದಽರೇ ನೋಡಿದ್ದೀರಾ? ಏನ್‌ ಹೇಳ್ಳಿ…!

ಈಗಿನ್ನೂ ಎಲ್ಲಾ ದಶಮಿ ಕಟಿಗೊಂಡು ಹೋಗುತಾವಂತ….; ದುಡ್ಡಿನ ಹಾಲು ದುಡ್ಡಿನ ಮಸರು ತರಿಸಿ ಚ್ಯಾವಡಿ ಕಟ್ಟೇಮ್ಯಾಲೆ ದಶಮೀ ಗಂಟು ಬಿಚ್ಚಿ, ತಿಂದು ಬರತಾವಂತ…. ವಾಲೀಕಾರರ ಹಾಂಗ! ಇವರು ಮಾಮಲೇದಾರರಽ ಇವರು..!

“ಹೋಗಬೇಕು ಹೋದರ ಫಿರತೀಮ್ಯಾಲೆ…. ನಮ್ಮ ಗೋವಿಂದ ರಾಯರಗೂಡಾ! ಅವರ ಮಡೀ ಏನೂ, ಮೈಲಿಗಿ ಏನೂ, ಎಲ್ಲಾ-ವಿಲಕ್ಷಣ ನೋಡ್ರಿ! ನರಸಿಂಹ ಸಾಲಿಗ್ರಾಮ ಇರತಿತ್ತು…. ಅವರ ಪೆಟ್ಟಿಗ್ಯಾಗ; ನಿತ್ಯ ಅದರ ಅಭಿಷೇಕ ಆಗದ ಹೊರತು ಊಟಾನೆ ಇಲ್ಲಾ! ನಾಕು ಸೇರು ಹಾಲು ಬೇಕಾಗತಿದ್ದೂ ಅಭಿಷೇಕಕ್ಕ! ಇಷ್ಟ ಹಾಲು ಹ್ಯಾಂಗ ಸಿಗತದ್ದೂವಽ….? ಹಳ್ಳಿ ಗೌಡ ಕುಲಕರ್ಣ್ಯಾರ ತಾಯಿ ಏನ ಹಡೆದ್ದು ಹಾಲು ಇಲ್ಲಾಽಂತ ಹೇಳಲಿಕ್ಕೆ!”

“ನಿಮಗೊಂದು ಮೋಜು ಹೇಳತೀನಿ ರಾಯರಽ! ಒಮ್ಮೆ ಚೈತ್ರ ಮಾಸ, ತಿಮ್ಮಾಪೂರದಾಗ ಮುಕ್ಕಾಂ ಇತ್ತು! ರಣಾ ರಣಾ ಬ್ಯಾಸಗಿ; ಬಿಸಲಾಗ ತಿರಿಗಿ ತಿರಿಗಿ ಬ್ಯಾಸತ್ತು ಹೋಗಿತ್ತು ಕಚೇರಿ….! ಒಂದು ದಿನಾ ಶ್ರೀಖಂಡ ಅರೇ ತಿಂದರ ಥಣ್ಣಗಽ ಅನಿಸೀತೂ ಅಂತಾ ವಿಚಾರ ಬಂತು. ನಸೀಕಲೇ ಎದ್ದವರೇ ಮಸರಗಡಗೀ ತರಿಸಲಿಕ್ಕೆ ಹೇಳಿದಿವಿ ಗ್ರಾಮಸ್ತರಿಗೆ! ಐದಾರು ಮಸರಗಡಗೀ ತಂದರು…! ನೋಡತೀವಽ ಮಸರಿನಮ್ಯಾಲ ಕೆನೀನೇ ಇಲ್ಲಾ! ಇಂಥಾ ಲುಚ್ಚಾ ಆಗೇದ ಜನಾ! ಒಂದರ ಬೆನ್ನ ಹಿಂದ ಒಂದರಂತೇ ಯಾವ ಗಡಗೀ ನೋಡಿದರೂ ಅದೇ ಹಣೇಬಾರ! ನಮ್ಮ ಸಿರಸ್ತಾರರ ಸಿಟ್‌ ಏನ್‌ ಕೇಳತೀರಿ… ಗಡಗೀ ತೊಗೊಂಡು ಬಿಸಾಟೆ ಬಿಟ್ಟರ, ಕುದರೀ ಕಾಲಾಗ ಹೋಗಿ ಬಿತ್ತು ಗಡಗಿ! ಧರ್ಮಸಾಲಿ ಮುಂದೆಲ್ಲ ಗೋಪಾಳ ಕಾವಲಿ ಅದ್ಹಾಂಗ ಆಯ್ತು! ಮತ್ತೇನದ…! ಗೌಡಾ ಕುಲಕರ್ಣಿ ಬಂದರು….; ನಮೋ ನಮೋ ಅನಿಸಿ ಬಿಟ್ಟೆ ಅವರ ಕಡಿಂದ! ಮುಂದೇನ್ ಕೇಳತೀರಿ, ಆ ಮುಕ್ಕಾಮಿನೊಳಗ ಇರೂ ತನಕ ಒಂದು ದಿನಾ ಶ್ರೀಖಂಡ… ಒಂದು ದಿನಾ ಬಾಸುಂದೀ….! ಅಮಲಂದರ ಹೀಂಗ ಕೂಡಿಸಬೇಕಾಗತದಽ ರಾಯರಽ! ಇಂಥಾ ಕೆಲಸ ದುಡ್ಡಿನ ಹಾಲು ಮಸರು ತೊಗೊಳ್ಳುವರ ಕಡಿಽಂದ ಆಗತದಽ ಎಲ್ಯಾರೆ?

“ಅಲ್ರಿ… ಇವರ ನಸೀಬಕ್ಕ ಅಡಗೀಯವರು ಸಿಗಬಾರದಽ? ತಾಲೂಕಿಗೆ ದೀಡನೂರ ಹಳ್ಳಿ; ಒಬ್ಬಿಲ್ಲಾ ಒಬ್ಬ ಕುಲಕರ್ಣೇರು ನೇಮಣೂಕಿ ಕೆಲಸ ಇದ್ದೇ ಇರತದ! ಊರಿದ್ದಲ್ಲೆ ಹೊಲಗೇರಿ ಅಂತ, ಎಲ್ಲಾಕಡೆ ಅದಾವ-ತೀನೂ ಇದ್ದೇ ಇರತಾವ! ಯಾರದಾದರೂ ಒಂದು ಅರ್ಜಿ ತಗೊಂಡು ಚೌಕಶೀಗೆ ಹಾಕ್ಕೋಽತ, ನಡದರಾತ್ರೆಪಾ….? ಕುಲಕರ್ಣಿ ಕ್ಯಾಂಪಿನ ಬೆನ್ನು ಹತ್ತೆ ಹತ್ತತಾನ…! ಅಲ್ಲಿಂದೇನು ಅಡಗೀ ಆಗತಽದ – ನೀರು ಆಗತಽದ- ಎಲ್ಲಾ ಆಗತಽದ! ನಮ್ಮ ರಾವಸಾಹೇಬರ ಕಡೆ ಇದ್ದನಲ್ಲಾ ನಾರಾಯಣಪ್ಪ! ಅವನದೊಂದು ಮೋಜಿನ ಕತೀನ. ಆತ; ಬಾಯೀಯವರ ಕೈತೆಳಗಿದ್ದು ಅಡಗೀ ಕಲಿತ ನಾರಾಯಣಪ್ಪ ‘ಇನ್ನೇನು ಕುಲಕರ್ಣಕಿ ಬ್ಯಾಡ, ಅಡಗೀನಽ ಮಾಡಿಕೊಂಡಿರೂದು ನೆಟ್ಟಿಗ! ಅಂದ. ಈಗ ನೋಡ್ರಿ ನಾನೂರು-ಐನೂರು ಜನರ ಪ್ರಸ್ತದ ಅಡಿಗಿ ಅಂದರೂನೂ ಹೊಡದು ಚೆಲ್ಲತಾನ ನಾನಾಯಣಪ್ಪ!

“ಇದೆಲ್ಲಾ ಅಮಲ್ದಾರರ ಕರ್ತಬ ಗಾರೀ ಮಾತು ಅದ ಏನ್ರೆವಾ! ಇವೇನ್ರಿ ಗಳಗಳಾ ಗಳಗಳಾ ಅಳತಾವ! ಸ್ನಾನ ಇಲ್ಲದಽನ, ಮೂರು ಮೂರು ದಿವಸ ತಂಗಳ ದಶೀಮೀ ತಿಂತಾವ! ಅದಕಽ ಕಲಿಯುಗಾ ಬಂತೂ ಅಂದೆ! ಏನು ಮಾಡೂದದಽ! ಆ ಕಾಲ ಹೋತು ಆ ಮಾತು ಹೋತು! ನಡೀರಿ ಪುರಾಣದ ಹೊತ್ತಾತು…. ಆಚಾರ್ರು ಬಂದಿದ್ದಾರು!”

(ಕಾರಕೂನರ ಮಾತನ್ನ ಕೇಳಿದ ರಾಯರ ‘ಈ ಕಲಿಯುಗದಲ್ಲಿ ಜೀವಿಸಿರುವದೇ ಬೇಡ!’ ಎಂದು ಪ್ರತಿಜ್ಞೆ ಮಾಡುತ್ತಲೇ ಪುರಾಣಕ್ಕೆ ಹೊರಟರು.)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇಹ ಆತ್ಮ ಭಾವ
Next post ತಪ್ಪಾಯ್ತು ನನದೂ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…