Home / ಕವನ / ಕವಿತೆ / ಮನೆವಾಳ್ತನ

ಮನೆವಾಳ್ತನ

ಅಬ್ಬೆಪಾರಿಗಳು ಮನೆವಾಳ್ತನಕಿರಬಾರದು
ಕೈ ಹಿಡಿದವಳು ಸೇರಿದಂತೆ ಎಲ್ಲರಿಗೂ ಸದರ

ಮನೆ ಅಳಿಯ
ಅತ್ತ ಮಗನೂ ಅಲ್ಲದ ಇತ್ತ ನೆಂಟನೂ ಅಲ್ಲದ
ಆಟಕ್ಕುಂಟು ಲೆಕ್ಕಕ್ಕಿಲ್ಲದ
ಮುಲಾಜು ಬದುಕಿನ ವ್ಯಕ್ತಿ

ಸರಿಕಂಡದ್ದ ಮಾಡುವ ಹಾಗಿರಲ್ಲ
ಸ್ವತಂತ್ರವಾಗಿ ನಡೆಯೋ ಹಾಗಿರಲ್ಲ
ವ್ಯಕ್ತಿ ಗೌರವ ಕೇಳೋ ಹಾಗಿರಲ್ಲ
ಸ್ವಲ್ಪ ಹಾಗೆ ಹೀಗೆ ಮಾಡಿದೆಯೋ
“ಊಂ! ನಿನ್ನನ್ನ ನಾವೇನೋ ಅಂದು ಕೊಂಡಿದ್ದೆವೆಲ್ಲಪ್ಪೋ…!
ಅದೆಲ್ಲಾ ಬಿಟ್ಟು ಬಿಡಪ್ಪ
ಕಲಿತಿದ್ದೆಲ್ಲಾ ಖರ್ಚು ಮಾಡಬೇಡ” ವೆಂದು ಗದರಿಸಿ, ಮೂದಲಿಸಿ
ಎಚ್ಚರಿಸುವರು.

ನಾದಾರಾಗಿರುವಾಗ,
ಸಕಲಿಷ್ಟು ನೀನೆ, ನಿನ್ನದೆ ಅಂದವರು
ಸ್ವಲ್ಪ ಗಂಟಾಗಿ,
ಮಕ್ಕಳು ಮರಿ ಕೈಗೆ ಬಂದ ಮೇಲೆ
ಈಯಪ್ಪ ನೊಬ್ಬನನ್ನು ತಂದು ಮೂಲ ಮಾಡಿಕೊಂಡೆವೆಂದು
ನೇರವಾಗಿ ಅನ್ನುವರು

ಥತ್ ಇವನ! ಎಂದು
ಅಪ್ಪನ ಮನೆಗೆ ಹೋದರೆ
ಇದ್ದ ಬದ್ದವರೆಲ್ಲಾ
ಇಷ್ಟು ದಿನ ವೆಲ್ಲಿದ್ದೆ?
ದುಡಿಮೆಯೇನು ಮಾಡಿದೆ?
ನಾಟಕವಾಡ ಬೇಡ
ನಿನ್ನದೇನಿದ್ದರೂ ಅಲ್ಲೆ!
ನೀನೆ ಯೋಚನೆ ಮಾಡು
ನಿನ್ನ ಹಾಗೇ ನಾವೂ ಹೋಗಿದ್ದು
ಈಗ ನೀನು ಬಂದ ಹಾಗೆಯೇ ನಾವು ಇಂದು ಬಂದಿದ್ದರೆ
ಇಲ್ಲಿ ಏನಾದರೂ ಉಳಿದಿರುತ್ತಿತ್ತಾ?
ತ್ಯಾರಕಾರ ನಂಗೆ ಬಂದು ಬಿಟ್ಟ!
ಎಲ್ಲಿಂದ ಬರುತ್ತೆ?
ದುಡಿಲಿಲ್ಲ; ದುಃಖ ಪಡಲಿಲ್ಲ
ನಡಿ, ನಡಿಯಣ್ಣ! ವೆನ್ನುವರು

ಜನ ನಂಬುವ ಹಾಗಿಲ್ಲ;
ಅತ್ತಲೂ ಇರುವರು ಇತ್ತಲೂ ಇರುವರು
ಅವರಿಗೂ ಹೇಳುವರು ನಮಗೂ ಹೇಳುವರು
ಕೆಟ್ಟರೆ ನೋಡೆವಲ್ಲಾ ಎನ್ನುವರು

ಸಾವರಿಸಿ, ಸಾವರಿಸಿ ಸೋತು
ಇನ್ನು ಆಗುವುದಿಲ್ಲ ವೆಂದಾಗ
ಅವರಿವರ ಕೈ ಕಾಲು ಕಟ್ಟಿ ಪಂಚಾಯತಿ ಕಲೆಸಿದೆವೆಂದರೆ-
“ಯಾರೂ ಅನ್ಯಾಯಕ್ಕೆ ಹೋಗ ಬಾರದು
ಆವತ್ತಿಗೂ ಇವತ್ತಿಗೂ ಮಾತು ಒಂದೇ ಆಗಿರಬೇಕು
ನಿಜ! ನಿನ್ನನ್ನು ನಾವು ಮಗನನ್ನಾಗಿ ಮಾಡಿಕೊಂಡು ಬಂದೆವು
ನೀನೂ ಅಂಗೆ ನಡಕೊಂಡೆ
ಇವತ್ತು ಕಂಡವರ ಮಕ್ಕಳು ಅಂತ ಇಲ್ಲದ್ದ ನುಡಿಬಾರದು
ನಿನ್ನ ಅಂಗೆ ಇಂಗೆ ಅಂದರೆ ನಮ್ಮ ನಾಲಿಗೆಗೆ ಉಳಬಿದ್ದಾವು!
ನಾವಿಲ್ಲಿ ಉಗಿತಿದ್ದೀವಪ್ಪಾ ಅಂದರೆ ನೀನು ದಾಟಿ ನಡೆದಿಲ್ಲ
ನಾವು ಕೂಡ ತಪ್ಪಿ ಏನೂ ನಡೆದಿಲ್ಲ
ಕೊಟ್ಟು, ಲಕ್ಷಣವಾಗಿ ಮದುವೆ ಮಾಡಿಹೆವು
ಅಳಿಯ ಮಗಳ ವೈಭವ ನೋಡಿ ಕಣ್ಣು ಪಾಪ ಕಳಕೊಂಡಿಹೆವು
ನಿನ್ನ, ನಿನ್ನ ಸಂಸಾರವನ್ನ, ಮಕ್ಕಳು ಮರಿಯನ್ನ ಸುಖವಾಗಿ
ನೋಡಿಕೊಂಡು ಬಂದಿಹೆವು

ಹಾಗಂತ, ಇವತ್ತು ನೀವು ಅಂಗೆ ಹೋಗಿರಪ್ಪ ಎಂದರೆ
ಅದೇವರು ಮೆಚ್ಚೇನಾ, ಮೆಚ್ಚಾನಾ !?
ನಿನಗೆ ಗೊತ್ತಿದೆ
ಏನೆದೆ ಏನಿಲ್ಲ ಅಂತ
ಈ ಮನೆ ಆವತ್ತು ನಿನ್ನದೆ ಈವತ್ತೂ ನಿನ್ನದೆ
ಬೆಳೆಯೋ ನಿನ್ನ ಅಳಿಯರಿಗೇನು ಕೊಡುತ್ತೀಯೋ
ನಿನ್ನ ಸೊಸೆಯರನ್ನ ಏನು ಮಾಡುತೀಯೋ
ಅವರನ್ನು ಹೇಗೆ ರತಿ ರಂಗೋಲಿ ಹತ್ತಿಸಬೇಕೋ
ಏನಪ್ಪಾ! ಇದನೆಲ್ಲಾ ನೀನು ನಿಧಾನವಾಗಿ ಯೋಚನೆ ಮಾಡಿ
ತೂಗಿ, ತೂಕ ಮಾಡಿ ಹಂಚಿಕೊಟ್ಟು ಹೋಗು
ಸರಿಯೇನ್ರಪ್ಪಾ!
ಇಲ್ಲಿ ಯಾರು ಧರ್ಮ, ಕರ್ಮ, ತಿಳಿಯದವರೇನಿಲ್ಲ
ನೀವೂ ಸ್ವಲ್ಪ ಆಲೋಚನೆ ಮಾಡಿ
ಹೀಗೀಗೆ ಹೋಗಿರಪ್ಪವೆಂದರೆ
ನಾವು ಹತ್ತು ಜನದ ಮಾತ ತೆಗೆದು ಹಾಕೋಕೆ ಬರುತ್ತಾ!?
ಇವತ್ತು ಅಳಿಯ ಮಗಳು ಸ್ವಲ್ಪವಾದರೂ ಪ್ರಪಂಚ ತಿಳಿದವರು
ಪ್ರಾಯದ ಮಕ್ಕಳು,
ಎಲ್ಲಿಯಾದರೂ, ಏನಾದರೂ ಮಾಡಿಕೊಂಡು ಬದುಕಬಲ್ಲರು
ನಮ್ಮದಿನ್ನೇನು ಉಳಿದಿದೆ?
ಊರು ಹೋಗೆನ್ನುವುದು ಕಾಡು ಬಾ ಎನ್ನುವುದು
ನಮ್ಮ ಮಕ್ಕಳು ಯಾವ ದಿನ ಮಾನದವರು
ಬದುಕು, ಬಾಳು ಗೊತ್ತಿಲ್ಲದವರು
ಇವರು ಊರಲ್ಲಿ ಬೂದಿ ಬಿಸಾಕಿ ಕೊಂಡಿರಬೇಕು
ನಮ್ಮ ಮನೆಯ ದೀಪವೂ ಉರಿಬೇಕು
ಇದರಲ್ಲಿ ಯಾರಿಗೂ ತಿಳಿಯದೆ ಇರುವುದು ಏನೂ ಇಲ್ಲ
ನೋಡ್ರಪ ಇರೋದಿದು!
ದೈವದವರು ನೀವು ಹೇಗೆ ಅಂದರೆ ಹಾಗೆನ್ನುವವರು ನಾವು,
ಎನ್ನುವರು
ಮಾತಿನ ಮೋಡಿಯಲ್ಲಿ ಮುಚ್ಚಿ ಹಾಕುವರು; ನಡಿ ಎನ್ನುವರು

ಅಲ್ಲಿಂದ ಇಲ್ಲೀವರೆಗೆ ಆಸೆಯಿಟ್ಟುಕೊಂಡು
ಎದೆ ಮುರುಕೊಂಡವನು
ಕೊಟ್ಟಿದ್ದ ಇಸುಕೊಂಡು
ಅಪ್ಪುಗೈ ಇಟ್ಟು ಕೊಂಡು ಹೊರಬರಬೇಕು
ಎಲಾ ಹೊಸದಾಗಿ ಶುರು ಮಾಡಬೇಕು
ತಪ್ಪಿ ಬಾಯಿ ಮಾಡಿದೆಯೋ
ಸಣ್ಣವರಿಂದ ಹಿಡಿದು ದೊಡ್ಡವರವರೆಗೆ
“ಏನಾದರೂ ಇವನು ಕ್ರಿಯ ಹಿಡಿಯಲಿಲ್ಲ ಕಣಯ್ಯ” ವೆಂಬ
ಆರೋಪ ಹೊರಿಸುವರು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...