Home / ಕವನ / ಕವಿತೆ / ಅವಲಂಬನ

ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...