Home / ಕವನ / ಕವಿತೆ / ಅವಲಂಬನ

ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ