Home / ಕವನ / ಕವಿತೆ / ಅವಲಂಬನ

ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...