ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏನಾಗುವೆ?
Next post ಭಾವ ಇರದ ಕವಿತೆ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…