Home / ಕವನ / ತತ್ವಪದ / ಭಗವಾನ ಶ್ರೀ ರಾಮಕೃಷ್ಣರಿಗೆ

ಭಗವಾನ ಶ್ರೀ ರಾಮಕೃಷ್ಣರಿಗೆ

ಪರಮಹಂಸರು ನೀವು ಮಹಾ ಚೇತನರು
ಬಾಳೆಲ್ಲ ದೈವತ್ವದಲ್ಲಿ ಕಳೆದವರು
ಪದವಿಗಳ ಪಡೆಯದ ವಿದ್ಯಾವಂತರು
ಅಮೋಘವನ್ನು ಸಾಧಿಸಿದ ಅಮರಜರು

ಕ್ಷುದೀರಾಮ ಚಂದ್ರಮಣಿ ದೈವ ಭಕ್ತರು
ಅವರ ಉದರದಿ ಜನಿಸಿದ ನೀವು ಸುತರು
ಬಾಲ್ಯವನ್ನು ಕಾಮಾಪುಕುರದಲಿ ಕಳೆದವರು
ಅಣ್ಣ ನನ್ನ ಹಿಂಬಾಲಿಸಿ ಕಲ್ಕತ್ತೆಗೆ ತೆರಳಿದವರು

ಲೌಕಿಕ ವಿದ್ಯೆಗಳ ಉಪೇಕ್ಷಿಸಿ ನಡೆದವರು
ಅಧ್ಯಾತ್ಮ ಭಕ್ತಿಗೆ ತಡಕಾಡಿದ ಮಹಾನರು
ರಾಣಿ ರಾಸಮಣಿ ಕಟ್ಟಿಸಿದ ಮಂದಿರದಲ್ಲಿ
ಕಾಳಿಕಾ ಮಾತೆಯ ಪೂಜೆಗೆ ನಿಂತವರು

ವಿಧ ವಿಧವಾಗಿ ದೇವಿಗೆ ಪೂಜಿಸಿದವರು
ದ್ವೈತ ಅದ್ವೈತ ವಿಶಿಷ್ಟಾ ದ್ವೈತದಿ ಪ್ರೀತಿಸಿದರು
ಸ್ವಾಮಿ ಸಖ ಸಖಿ ಪ್ರಯತಮನಂತೆ ದೈವಕಂಡವರು
ನಾಲ್ಕು ಯೋಗಗಳೆಲ್ಲ ಸಾಧಿಸಿಕೊಂಡವರು

ಹಿಂದು ಮಹ್ಮದಿ ಕ್ರೈಸ್ತರಂತೆ ಆರಾಧಿಸಿದವರು
ಶಿಷ್ಯ ಕೋಟಿಯನ್ನೆ ನಿರ್ಮಾಣ ಮಾಡಿದವರು
ನರೇಂದ್ರನಿಗೆ ತನ್ನದೆಲ್ಲವೂ ಧಾರೆ ಎರೆದವರು
ಗೃಹಸ್ಥರಾಗಿ ಮಡದಿಯನ್ನು ಪೂಜೆ ಮಾಡಿದವರು

ವೇದ ಉಪನಿಷತ್ತದ ಅಮೃತವ ಧಾರೆಯೆರೆದವರು
ಹಿಂದು ಧರ್ಮದ ಧ್ವಜ ವಿಶ್ವಕ್ಕೆ ಪದರ್ಶಿಸಿದವರು
ಕೇವಲ ದೇವ ಸಂತ ಜ್ಞಾನಗಳಲ್ಲರವರು
ಸಾಕ್ಷಾತ್ ಮಾಣಿಕ್ಯ ವಿಠಲನಾದವರು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...