ನಾವು ಬಡವರು

ನಾವು ಮುಟ್ಟಿ ನಿಂತ ಮರದ
ಹೂವು ಉದುರಿತು
ನಾವು ನಡೆದ ಹಾದಿ ಹಸಿರು
ಉರಿದು ಹೋಯಿತು

ನಾವು ಕರೆದ ಕೆಚ್ಚಲಲ್ಲಿ
ಹಾಲು ಬತ್ತಿತು
ನಾವು ಹುಡುಕಿ ಕಂಡ ಹೃದಯ
ರಾಗ ಸತ್ತಿತು

ಸೋತ ಮುಖದ ಮನೆಗೆ ಬಳಿಯೆ
ಸುಣ್ಣ ಸಿಡಿಯಿತು
ಬಡವರೆಂದು, ಕಡೆದ ಕಲ್ಲು
ಕಣ್ಣ ಕಳೆಯಿತು

ಹಸಿರು, ಕೆಂಪು, ಬಟ್ಟಬಯಲು
ಎಲ್ಲ ಒಂದೇ ಬಣ್ಣವು
ಮಣ್ಣ ಹಾದಿ, ಟಾರು ಬೀದಿ
ಕಪ್ಪುಗಟ್ಟಿದ ತಂತಿಯು

ನಿಂತ ನೆಲದ ಬಿರುಕಿನಲ್ಲಿ
ಸುಳಿದಾಡುವ ಉಸಿರು
ಭೂಕಂಪದ ನಡುಕದಲ್ಲು
ಸಾವಿಲ್ಲದ ಹೆಸರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಫ್. ಎಮ್. ದೋಸ್ತೋವಸ್ಕಿಯ – Crime and Punishment
Next post ನನ್ನ ಕೆಲಸ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys