ನೂರು ನೆರಳುಗಳು

ನಕ್ಕವರೆಲ್ಲ ನನ್ನವರೆಂದು
ಮಳೆಗರೆಯಿತು ಮನಸು
ಸುತ್ತ ಮುತ್ತಿದ ಕಂಡ ಕಂಡವರಿಗೆ
ಹದವಾಯಿತು ಕನಸು

ಕಳಕಳ ಎನ್ನುವ ಕನಸಿಗೆ ಅವರು
ಅಮಲಿನ ಹಾಸಿಗೆ ಹಾಸಿದರು
ನರಳಿತು ಕನಸು ಸುಖ ಸಂತಸದಲಿ
ಮರೆತು ಹೋಯಿತು ಮಳೆ ಮನಸು

ಬಸಿರಿನ ಕನಸಿಗೆ ಹುಟ್ಟಿದ ಮಕ್ಕಳು
ನೆಟ್ಟಗಿದ್ದರೆ ತಮ್ಮವರು
ಮೂಗೊ ಕಿವುಡೊ ಕುಂಟೊ ಕುರುಡೊ
ಸೊಟ್ಟಗಿದ್ದರೆ ನನ್ನವರು

ಗಜಿಬಿಜಿ ಕೆಸರಿನ ಜನ ಜೈಲಿನಲಿ
ಹೂತ ಮನಸಿದು ಕಂಬಿ ಎಣಿಸಿದೆ
ಬಿಡುಗಡೆ ಬೇಡದೆ, ಒಳಗೇ ಸಾಯದೆ
ದುಗುಡದ ದಿನಗಳ ದಿನ್ನೆಯೇರಿದೆ

ಕಂಬಿಯ ನಡುವೆ ತೂರುವ ಬೆಳಕಿಗೆ
ಕಾಯುತ ಕಾಯುತ ಕಾಯುತ ನಿಂತೆ
ಒಬ್ಬನೆ ಎಂದು ಒಳಗಡೆ ಹುಡುಕಿದೆ
ನೂರು ನೆರಳುಗಳು ನನ್ನಂತೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಮತೀಂದ್ರ ನಾಡಿಗರ “ದಾಂಪತ್ಯ ಗೀತ”
Next post ಒಮ್ಮೆ ಪ್ರೀತಿಯಲಿ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…