ಬಾಯಾರಿದೆ ಹೃದಯ

ಹೂತು ಹೋಗಿದೆ ಒಲವಿನ ಮಾತು
ಉಸಿರು ನರಳಿದೆ ಸೆಣಸುತ ಸೋತು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ಹೊಟ್ಟೆಯ ಒಳಗಿನ ಸುಟ್ಟ ವಾಸನೆ
ಬೀದಿಗೆ ಹರಿದು ಬಡತನ ಬಯಲು
ಮೂಗು ಮುಚ್ಚಿದೆ ಮನೆ ಮನೆ ಸಾಲು
ಬೀದಿ ಬೀದಿಯಲಿ ಹುಡುಕಿ ನೋಡಿದರು
ಹೃದಯದ ವಿಳಾಸ ಅಲ್ಲಿಲ್ಲ
ಬೆವರು ಬಸಿದರೂ ಸಿಗಲಿಲ್ಲ.

ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ನೆಲಮಾಳಿಗೆ ಮನಸು
ಸೆರೆವಾಸದ ಕನಸು
ಬೆತ್ತಲ ಭಾವನೆ ಕೊಯ್ಯುವ ಕತ್ತಲು
ಇದ್ದರು ಪ್ರಾಣ, ಗೋರಿಯ ಬದುಕು
ಒಣ ವೇದಾಂತದ ವಿಷ ಸಾಕು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ
ಇನ್ನೆಲ್ಲಿದೆ ಸಮಯ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಡ್ಡರ್ಸೆ ರಘುರಾಮಶೆಟ್ಟಿ ಅವರ ‘ಬಹುರೂಪಿ ಅರಸು’-ನೇರ ಅನುಸಂಧಾನ
Next post ಆಡಿ ಬಾರೋ ರಂಗ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…