ಬಾಯಾರಿದೆ ಹೃದಯ

ಹೂತು ಹೋಗಿದೆ ಒಲವಿನ ಮಾತು
ಉಸಿರು ನರಳಿದೆ ಸೆಣಸುತ ಸೋತು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ಹೊಟ್ಟೆಯ ಒಳಗಿನ ಸುಟ್ಟ ವಾಸನೆ
ಬೀದಿಗೆ ಹರಿದು ಬಡತನ ಬಯಲು
ಮೂಗು ಮುಚ್ಚಿದೆ ಮನೆ ಮನೆ ಸಾಲು
ಬೀದಿ ಬೀದಿಯಲಿ ಹುಡುಕಿ ನೋಡಿದರು
ಹೃದಯದ ವಿಳಾಸ ಅಲ್ಲಿಲ್ಲ
ಬೆವರು ಬಸಿದರೂ ಸಿಗಲಿಲ್ಲ.

ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ.

ನೆಲಮಾಳಿಗೆ ಮನಸು
ಸೆರೆವಾಸದ ಕನಸು
ಬೆತ್ತಲ ಭಾವನೆ ಕೊಯ್ಯುವ ಕತ್ತಲು
ಇದ್ದರು ಪ್ರಾಣ, ಗೋರಿಯ ಬದುಕು
ಒಣ ವೇದಾಂತದ ವಿಷ ಸಾಕು
ಸಾಯುವ ಮುಂಚೆ ನೀರು ಕೊಡಿ
ಬಾಯಾರಿದೆ ಹೃದಯ
ಇನ್ನೆಲ್ಲಿದೆ ಸಮಯ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಡ್ಡರ್ಸೆ ರಘುರಾಮಶೆಟ್ಟಿ ಅವರ ‘ಬಹುರೂಪಿ ಅರಸು’-ನೇರ ಅನುಸಂಧಾನ
Next post ಆಡಿ ಬಾರೋ ರಂಗ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys