ಜೀವಗಾಳಿ


ಭೂಮಿ ಬಿರುಕು ಬಿಟ್ಟಿತು
ನಾಡಿನ ನರಗುಂದದಲ್ಲಿ ನಾಡಿ ಮಿಡಿತ ಕೇಳಿ
ಹೂತು ಹೋದ ಹೆಣಗಳೆಲ್ಲ
ಬರಡು ನೆಲದ ಕಣಗಳೆಲ್ಲ
ಪುಟಪುಟಿದು ಸೆಟೆದವು, ಬೀಸಿ ಜೀವಗಾಳಿ.

ನೆಲದೊಳಗೆ ಭೋರ್ಗರೆತ, ಸುಳಿಸುತ್ತುವ ಸೆಳೆತ
ಸಿಟ್ಟಿನ ಸುಳಿ ಸಿಂಬೆ ಸುತ್ತಿ
ಕುದಿ ಕುದಿಯುವ ರಕ್ತವೆಲ್ಲ
ಕೈಯಾಗಿ ಕಿಡಿಯಿತು ಬಿಗಿದ ಮುಷ್ಟಿ ಎದ್ದಿತು
ನೋವೆ ನೆರೆದು ನಿಂತಂತೆ
ನೆಲದ ಒಡಲು ಗುಡುಗು ಸಿಡಿಲು
ಸೀಳಿ ಸೃಷ್ಟಿಯಾಗುತ್ತಿರುವ ಸಾಲು ಸಾಲು ಕೈಗಳು
ಬುಸುಗುಟ್ಟುವ ಹೆಡೆಗಳು
ಜೊತೆ ಜೊತೆಯಲ್ಲಿ ಸೆಟೆದು ನಿಂತ
ಅರೆಬೆತ್ತಲ ನಡುಗತ್ತಲ
ಭಯ ಬದುಕಿನ ಮೈಗಳು
ಹುಟ್ಟಿಕೊಂಡವೆಲ್ಲೆಲ್ಲೂ ಕಾದ ಕೆಂಡ ಕಿಡಿಗಳು
ಮೂಳೆಯೊಳಗೆ ಮನಸ ಹರಿಸಿ
ಕಾಲಿನಲ್ಲಿ ಕನಸು ನೆಲೆಸಿ
ಶೋಷಣೆಯ ಸಜ್ಜೆ ಮೇಲೆ ಹೆಜ್ಜೆಯಿಟ್ಟು ರೈತರು


ಕೆದರಿದ ಕಿಡಿ ಕೂದಲು, ಉಬ್ಬಿ ಹೋದ ಕಾಲು
ಗರಬಡಿದ ಬಾಗಿಲಿಗೆ ಝಾಡಿಸಿ ಒದ್ದು
ನಗರವೆಲ್ಲ ಮೈ ಕೊಡವಿ ನಿಟ್ಟು ಬಿದ್ದು ಎದ್ದು
ಹೃದಯವಾಗಿ ನಿಂತಿತು, ಹಾರವಾಗಿ ಹರಿಯಿತು
ತೇಗುತ್ತಿದ್ದ ಟಾರು ರಸ್ತೆ ತೆಪ್ಪಗಾಯಿತು
“ಸೌಧ”ದತ್ತ ಸಾಗಲು ತೆಪ್ಪವಾಯಿತು.


“ನಿಧಿ” ನೆಲೆಯೂರಿದ ವಿಧಾನ ಸೌಧ
ಸರ್ಪಕಾವಲಿನ ಶ್ರೀ ಕುರುಡ
ನೆಲದ ಒಡೆಯರು ನಮ್ಮ ರೈತರು
ಕೊಚ್ಚಿ ಬಂದರು ರೊಚ್ಚೆದ್ದವರು

ವಿಧಾನ ಸೌಧದ ಹೊಟ್ಟೆಯ ಒದ್ದು
ಕಲ್ಲು ಕಲ್ಲಿಗೂ ಕ್ರಾಂತಿಯ ಸದ್ದು
ಎದೆಯುಬ್ಬಿಸಿ ಒಳ ನುಗ್ಗಿದರು

ಅತ್ತಿಂದಿತ್ತ ಹಾರುವ ಬಾವಲಿ
ಕಣ್ಣಿಗೆ ಬಡಿಯುವ ಕಳ್ಳಾಟ
ದಿಗಿಲು ಹುಟ್ಟಿಸುವ ದುರ್ನಾತ

ಕಿಡಿಕಾರುವ ಕಣ್ ಬೆಳಕನು ಬಿಟ್ಟು
ಎದೆ ಮನೆ ಬಾಗಿಲು ಭೇದಿಸಿ ಹೊಕ್ಕು
ಒಳಗೆಲ್ಲಾ ಹುಡುಕಾಡಿದರು
ಹೃದಯವ ಕಾಣಲು ಹುಡುಕಿದರು
ಮೂಲೆ ಮೂಲೆಯ ತಡಕಿದರು

ಕತ್ತಲು ಕವಿದರು ಸಿಗಲಿಲ್ಲ.
ಹೃದಯವೆ ಅಲ್ಲಿ ಇರಲಿಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭವಿಷ್ಯದ ಚಿಂತೆ
Next post ಸಾಯಿ ರಾಮ್

ಸಣ್ಣ ಕತೆ

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…