Home / ಕವನ / ಕವಿತೆ / ಷಣ್‍ಮುಖ

ಷಣ್‍ಮುಖ


ಕೋಳಿ ಕೂಗೋದು ಕಾದು
ಬಾಳ ತಂಗಳು ತಿಂದು
ಹೊತ್ತಿನ ಜತ್ಯಾಗೆ ಹೊಲದಾಕೆ ಬಂದು
ಬಿತ್ತಿದ್ದು ಒಣ ನವಣೆ
ಬೆಳೆದದ್ದು ಬರೀ ಬವಣೆ.


ಹಾರಕ ತಂದು ನೆಲತುಂಬ ಹೊಯ್ದರೂ
ಸುರಕೊಂಡಿದ್ದು ಮಾತ್ರ ಹತ್ತಾರು ಸೇರು
ತಿಂದು ಕುಂತರೆ ಈಗ
ಮುಂದೆ ಬೀಜಕ್ಕೆ ಕಾಳಿಲ್ಲ
ಹೊಟ್ಟೆ ಕಟ್ಟಿದರೂ ಹಾರಕಕ್ಕೆ ಬೆಲೆಯಿಲ್ಲ.


ಕಡಲೆ ಕಾಯಿಯ ಬೀಜ
ಒಣ ಹೂಲದ ರಾಜ
ಬಿತ್ತಿ, ಬೆಳೆಯಿತು ಆಸೆ.

ಹರಡಿಕೊಂಡು ಗಿಡ
ನೂರು ಬೇರಿನ ಬುಡ
ರೆಪ್ಪೆಯಂಚಿನ ಒಳಗೆ
ಬಿರಿದ ಕಮಲ
ಕಣ್ಣು ತೆರೆದರೆ ಅಲ್ಲಿ
ಉರಿಗಣ್ಣ ಸೂರ್ಯನಿಗೆ
ಸೀದು ಹೋದ ಹಸಿರು
ಹೊಲವೆಲ್ಲ ನಿಟ್ಟುಸಿರು.


ರಾಗಿ ಪೈರಿನ ಬೆಳಸು
ತೂಗಿ ತೊನೆಯುವ ತೆನೆ
ಎದೆಯಾಗೆ ಮೂಡಿದವು
ರಾಶಿರಾಶಿ ಮುದ್ದೆ.

ಕುಣಿದು ಕುಪ್ಪಳಿಸಿ
ಕೈ ಚಾಚಿದರೆ
ಬಂಧನದ ಬೇಡಿ
ತೆನೆ ರುಂಡ ತಂದು
ಒಂದರ ಹಿಂದೊಂದು
ತುಂಬಿದ ಗಾಡಿ.


ಭತ್ತ ಬೆಳೆಯೋಣೆಂದರೆ
ಬಾವಿಯಿಲ್ಲ
ಕೆರೆಯ ಹಿಂದುಗಡೆ
ಗದ್ದೆಯಿಲ್ಲ.

ಅಕ್ಕಿ ಹಕ್ಕಿಯ ರೆಕ್ಕೆ
ಸುಟ್ಟು ಬಿದ್ದಿತು ನೆಲಕೆ
ಅನ್ನ ತಿನ್ನುವ ಆಸೆ
ಬಂಜೆ ಬಯಕೆ.


ನವಣೆ ಹಾರಕವಿಲ್ಲ
ಕಡಲೆಕಾಯಿ ಬೀಜವಿಲ್ಲ
ಅಕ್ಕಿ ರಾಗಿಯ ಹೆಸರು
ಎತ್ತೊ ಹಂಗಿಲ್ಲ.

ಕಂಡೂರ ಹೊಲದಾಗೆ
ಕೂಲಿ ಮಾಡಿದರುಂಟು
ಎತ್ತು ನೇಗಿಲಿಗೆಲ್ಲ
ಬಾಡಿಗೆ ನಂಟು.

ನೋವು ತುಂಬಿದ ನಾನು
ಏನ ಪ್ರೀತಿಸಲಿನ್ನು
ನೆಲವೂ ಇಲ್ಲ, ನೇಗಿಲೂ ಇಲ್ಲ.
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...