ಬೋಧವಾದ ಮೇಲೆ ಜನರಪವಾದಕಂಜುವರೆ?
ಆದಿ ಅಂತ್ಯ ಆತ್ಮ ಆತ್ಮರುಭಯ ಬೇಧವಳಿದು ಸಾಧುಯೆನಿಸಿ ||ಪ||
ಕಾಲ ಕರ್ಮ ತುಳಿದು ತೂರ್ಯ ಜೋಲಿಯೊಳಗೆ ನುಡಿಯುತಿರಲು
ಖೂಳಜನರು ಕೇಳಿ ಸಪ್ಪ ಕೀಳೋಣಾಗದೆನುತಿರಲು ||೧||
ಪರಮಗುರು ನಿರಾಲಹಸ್ತಾ ಶಿರದಮ್ಯಾಲ ಹರಿಯುತಿರಲು
ನರರು ತನ್ನ ಜರಿದು ಸಪ್ಪ ಹರಿಯೋಣಾಗದೆನುತಿರಲು ||೨||
ತಂದೆ ಶಿಶುನಾಳಧೀಶನೆ ಇಂದು ಎಮಗೆ ಪಾಲಿಸೆಂದು
ಬಿಂದು ವಸ್ತು ಸವಿದು ಪರಮಾನಂದದೊಳಗೆ ಮೆರೆಯುತಿರಲು ||೩||
****
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013