ದುಡಿದು ಗಳಿಸಿರ್‍ಪನ್ನ ಪಕ್ಕದೊಳಿರ್‍ದು ಬಡತನ
ದೂರದೂರದ ಸೂರೆಯುದ್ಯೋಗಿಗೆಲ್ಲ ಸಿರಿತನ
ದೈನ್ಯವಲಾ ಎಸೆದ ಬಿಸ್ಕತ್ತಿಗೆಳಸುವ ಶ್ವಾನ
ದಂತೆಮ್ಮ ರೈತರ ಪಾಡು ದುಡ್ಡನಾಘ್ರಾಣಿಸುತಿರಲ್
ಧರೆ ಸತ್ತ್ವಗಳಂತೆ ಸೂರೆ ಹೋಗುತಿದೆ ಅಧಿಕ ಇಳುವರಿಗೆ – ವಿಜ್ಞಾನೇಶ್ವರಾ
*****