Home / ಕವನ / ಕವಿತೆ / ಕನಸುಗಳೇ ಹೀಗೆ

ಕನಸುಗಳೇ ಹೀಗೆ

ನೂರೆಂಟು ಕನಸುಗಳ ಚಿತ್ತಾರ ರಾತ್ರಿಯೆಲ್ಲಾ
ನನ್ನ ಪಕ್ಕದಲಿ ನೀನು ಕುಳಿತಂತೆ
ಹೇಗೆ ಮೋಹಗೊಂಡೆನೋ ಏನೋ, ರಾತ್ರಿ
ಬಾಗಿಲು ತಟ್ಟಿದ ಸಪ್ಪಳಕೆ ಬಿಚ್ಚಿದೆ
ತೆರೆದೆ ಬಾಗಿಲನು, ಸುಳಿಗಾಳಿ ಮೈ ಸೋಕಿದಾಗ
ಮನದಲ್ಲಿ ಹಾವು ಹರಿದಾಡಿದಂತಾಗಿ
ಹಾಸಿಗೆಯಲಿ ಪುನಃ ಒರಗಿದೆ, ದುಗುಡತೆಯಿಂದಲಿ
ನೀನಿಲ್ಲದ ಈ ಮನ ಹಾಳಾದ ಬೋರು
ಈ ಜೀವಕೆ ಪ್ರಾಣವಾಯು ನೀನು
ಕತ್ತಲಲಿ ಕುಳಿತು ಹುಡುಕಾಡಿದೆ ನಿನ್ನಾಬಿಂಬ
ನೀನಿಲ್ಲದೆ ಎನ್ನ ಹೃದಯ ಕಡು
ಬೇಸಿಗೆಯ ನದಿಯಂತೆ
ಇಷ್ಟೇ ಸಾಕೆನೆಗೆ
ಸಿಡಿಲು ಬಡಿದ ಮರದಂತಾಗಲು

ನಿನ್ನಾ ಹೆಸರ್‍ಹೇಳಿದರಷ್ಟೇ
ಎನಗೆ ಮಾನ ಸಮ್ಮಾನ ಸ್ವರ್ಗದಲಿ
ನೀ ಬಂದರೆ ವಿವಷವಾದ ಮನಕೆ, ಸಂಭ್ರಮದ
ಸಂತಸದ ಮಹಾದಾನಂದದ ಹೊನಲು
ಅತ್ತಿತ್ತ ಹೊರಳಾಡಿದರೆ ಬರುವುದೇ ನಿದ್ದೆ
ನೀನು ನನ್ನ ಪಕ್ಕದಲ್ಲಿದ್ದಂತೆ
ನಿನ್ನಾ ಹೆಜ್ಜೆಯ ಗೆಜ್ಜೆ ನಾದಕೆ
ಅಡುಗೆ ಮನೆಯ ಬಳೆಯ ಸದ್ದಿಗೆ
ಬಂದು ನೋಡಿದರೆ
ಕನಸೇ

ಹೂವು ಮುಡಿಸಿದಂತೆ
ಕೆನ್ನೆ ಸವರಿದಂತೆ
ನೀನಿಲ್ಲದಿದ್ದರೆ ಮನದ ಜ್ಯೋತಿ ಏಕೆ?
ದೀವಟಿಗೆಯು ಕೂಡ ಹೊತ್ತಲೊಲ್ಲದು
ಬಾ ಬೇಗ, ಪ್ರೀತಿಯ ತುಂತುರಿನ ಸಿಂಚನ ನೀಡು
ಸ್ನಾನಕ್ಕಿಟ್ಟು ಬಕೆಟ್ ನೀರಿನಲ್ಲಿ ನಿನ್ನ ಕಾಣುವೆ
ರಾತ್ರಿಯೆಲ್ಲಾ ಹೀಗೆ ಕನಸು ನಿಲ್ಲಲಾರವು
ಜೊಂಪು ಹತ್ತುವುದು, ಪುನಃ ಎಚ್ಚರವಾಗುವುದು
ನಡುವೆ ಒಂದೊಂದೇ ಕನಸು.
ರಾಜ ರಾಣಿಯರ ಕನಸಿನ ಸೊಗಸುಗಾರಿಕೆ
ಆನೆ ಅಂಬಾರಿಯಲಿ ನಿನ್ನಾಪಕ್ಕದಲ್ಲಿ ನನ್ನ ಕಂಡದ್ದು
ಅಂತಃಪುರದ ಪಲ್ಲಂಗದಲಿ ಆಕೆಯ ಕಂಡರೆ
ಕನಸೇ

ಸಾವೇ ಇಲ್ಲದ ಕನಸುಗಳು
ಓ, ಕನಸುಗಳೇ ಬನ್ನಿ!
ಜೀವ ಕೊಡಿ ಈ ಶಿಲ್ಪಕೆ
ಚೆಂದುಳ್ಳ ಕನಸುಗಳೇ
ನಿಮ್ಮ ಜೊತೆಗೆ ಚದುರಂಗದಾಟವೇ
ಹಣೆ ಕಪೋಲದ ಮೇಲೆ ಸುಳಿದಾಡಿ
ಮನವ ಅಲ್ಲೋಲ ಕಲ್ಲೋಲ ಮಾಡಿ
ಕದ್ದು ಮಾಯವಾಗುವ ಕನಸುಗಳೇ
ಆ ಕನಸುಗಳಲಿ ಕಾಂತೆಯ ಕಂಡು
ಬೆಚ್ಚಿಬಿದ್ದು ಮುಖವೆತ್ತಿ ನೋಡಿದರೆ
ಕನಸೇ

ಏನೂ ಕಾಣದಿದ್ದರೂ ಮನದಲ್ಲೇನೋ ಸಂತಸ
ಸ್ವಪ್ನಗಳೇ ಹೀಗೆ
ಮುಗಿಯಲೊಲ್ಲವು
ಕಾಡುವುದನು ಬಿಡಲೊಲ್ಲವು
ಕಣ್ಣು ತೆರೆದು ಕುಳಿತರೆ ಬೇರೊಂದು ಕನಸು
ಅಂಬಾರಿಯಿಲ್ಲ, ಸಂಭ್ರಮವಿಲ್ಲ
ಯಾರ ಬಿಂಬವೂ ಇಲ್ಲ, ಹೆಜ್ಜೆಯ ಗೆಜ್ಜೆನಾದವಿಲ್ಲ,
ಬಳೆ ಸಪ್ಪಳವಿಲ್ಲ, ಮುಖದಲಿ
ಸಂತಸ, ನಗು ಮೊದಲಿಲ್ಲ,
ಬಸ್ಸು, ಕಾರು, ಓಡಿದ ಸಪ್ಪಳ
ಜನಗಳ ಮಾತು, ಗದ್ದಲದ ನಡುವೆ
ಪಕ್ಕದ ಮನೆಯ ರೇಡಿಯೋ ಹಾಡಿಗೆ
ಹೋಯಿತು ಮನ
ಜಾರಿದವು ಕನಸುಗಳು
ಜಾರಿದವು ಕನಸುಗಳು.
*****
೧೯೯೮ ರ ಕರ್ಮವೀರ ದೀಪಾವಳಿ ವಿಶೇಷಾಂಕದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...