Home / ಕವನ / ಕವಿತೆ / ಕನಸುಗಳೇ ಹೀಗೆ

ಕನಸುಗಳೇ ಹೀಗೆ

ನೂರೆಂಟು ಕನಸುಗಳ ಚಿತ್ತಾರ ರಾತ್ರಿಯೆಲ್ಲಾ
ನನ್ನ ಪಕ್ಕದಲಿ ನೀನು ಕುಳಿತಂತೆ
ಹೇಗೆ ಮೋಹಗೊಂಡೆನೋ ಏನೋ, ರಾತ್ರಿ
ಬಾಗಿಲು ತಟ್ಟಿದ ಸಪ್ಪಳಕೆ ಬಿಚ್ಚಿದೆ
ತೆರೆದೆ ಬಾಗಿಲನು, ಸುಳಿಗಾಳಿ ಮೈ ಸೋಕಿದಾಗ
ಮನದಲ್ಲಿ ಹಾವು ಹರಿದಾಡಿದಂತಾಗಿ
ಹಾಸಿಗೆಯಲಿ ಪುನಃ ಒರಗಿದೆ, ದುಗುಡತೆಯಿಂದಲಿ
ನೀನಿಲ್ಲದ ಈ ಮನ ಹಾಳಾದ ಬೋರು
ಈ ಜೀವಕೆ ಪ್ರಾಣವಾಯು ನೀನು
ಕತ್ತಲಲಿ ಕುಳಿತು ಹುಡುಕಾಡಿದೆ ನಿನ್ನಾಬಿಂಬ
ನೀನಿಲ್ಲದೆ ಎನ್ನ ಹೃದಯ ಕಡು
ಬೇಸಿಗೆಯ ನದಿಯಂತೆ
ಇಷ್ಟೇ ಸಾಕೆನೆಗೆ
ಸಿಡಿಲು ಬಡಿದ ಮರದಂತಾಗಲು

ನಿನ್ನಾ ಹೆಸರ್‍ಹೇಳಿದರಷ್ಟೇ
ಎನಗೆ ಮಾನ ಸಮ್ಮಾನ ಸ್ವರ್ಗದಲಿ
ನೀ ಬಂದರೆ ವಿವಷವಾದ ಮನಕೆ, ಸಂಭ್ರಮದ
ಸಂತಸದ ಮಹಾದಾನಂದದ ಹೊನಲು
ಅತ್ತಿತ್ತ ಹೊರಳಾಡಿದರೆ ಬರುವುದೇ ನಿದ್ದೆ
ನೀನು ನನ್ನ ಪಕ್ಕದಲ್ಲಿದ್ದಂತೆ
ನಿನ್ನಾ ಹೆಜ್ಜೆಯ ಗೆಜ್ಜೆ ನಾದಕೆ
ಅಡುಗೆ ಮನೆಯ ಬಳೆಯ ಸದ್ದಿಗೆ
ಬಂದು ನೋಡಿದರೆ
ಕನಸೇ

ಹೂವು ಮುಡಿಸಿದಂತೆ
ಕೆನ್ನೆ ಸವರಿದಂತೆ
ನೀನಿಲ್ಲದಿದ್ದರೆ ಮನದ ಜ್ಯೋತಿ ಏಕೆ?
ದೀವಟಿಗೆಯು ಕೂಡ ಹೊತ್ತಲೊಲ್ಲದು
ಬಾ ಬೇಗ, ಪ್ರೀತಿಯ ತುಂತುರಿನ ಸಿಂಚನ ನೀಡು
ಸ್ನಾನಕ್ಕಿಟ್ಟು ಬಕೆಟ್ ನೀರಿನಲ್ಲಿ ನಿನ್ನ ಕಾಣುವೆ
ರಾತ್ರಿಯೆಲ್ಲಾ ಹೀಗೆ ಕನಸು ನಿಲ್ಲಲಾರವು
ಜೊಂಪು ಹತ್ತುವುದು, ಪುನಃ ಎಚ್ಚರವಾಗುವುದು
ನಡುವೆ ಒಂದೊಂದೇ ಕನಸು.
ರಾಜ ರಾಣಿಯರ ಕನಸಿನ ಸೊಗಸುಗಾರಿಕೆ
ಆನೆ ಅಂಬಾರಿಯಲಿ ನಿನ್ನಾಪಕ್ಕದಲ್ಲಿ ನನ್ನ ಕಂಡದ್ದು
ಅಂತಃಪುರದ ಪಲ್ಲಂಗದಲಿ ಆಕೆಯ ಕಂಡರೆ
ಕನಸೇ

ಸಾವೇ ಇಲ್ಲದ ಕನಸುಗಳು
ಓ, ಕನಸುಗಳೇ ಬನ್ನಿ!
ಜೀವ ಕೊಡಿ ಈ ಶಿಲ್ಪಕೆ
ಚೆಂದುಳ್ಳ ಕನಸುಗಳೇ
ನಿಮ್ಮ ಜೊತೆಗೆ ಚದುರಂಗದಾಟವೇ
ಹಣೆ ಕಪೋಲದ ಮೇಲೆ ಸುಳಿದಾಡಿ
ಮನವ ಅಲ್ಲೋಲ ಕಲ್ಲೋಲ ಮಾಡಿ
ಕದ್ದು ಮಾಯವಾಗುವ ಕನಸುಗಳೇ
ಆ ಕನಸುಗಳಲಿ ಕಾಂತೆಯ ಕಂಡು
ಬೆಚ್ಚಿಬಿದ್ದು ಮುಖವೆತ್ತಿ ನೋಡಿದರೆ
ಕನಸೇ

ಏನೂ ಕಾಣದಿದ್ದರೂ ಮನದಲ್ಲೇನೋ ಸಂತಸ
ಸ್ವಪ್ನಗಳೇ ಹೀಗೆ
ಮುಗಿಯಲೊಲ್ಲವು
ಕಾಡುವುದನು ಬಿಡಲೊಲ್ಲವು
ಕಣ್ಣು ತೆರೆದು ಕುಳಿತರೆ ಬೇರೊಂದು ಕನಸು
ಅಂಬಾರಿಯಿಲ್ಲ, ಸಂಭ್ರಮವಿಲ್ಲ
ಯಾರ ಬಿಂಬವೂ ಇಲ್ಲ, ಹೆಜ್ಜೆಯ ಗೆಜ್ಜೆನಾದವಿಲ್ಲ,
ಬಳೆ ಸಪ್ಪಳವಿಲ್ಲ, ಮುಖದಲಿ
ಸಂತಸ, ನಗು ಮೊದಲಿಲ್ಲ,
ಬಸ್ಸು, ಕಾರು, ಓಡಿದ ಸಪ್ಪಳ
ಜನಗಳ ಮಾತು, ಗದ್ದಲದ ನಡುವೆ
ಪಕ್ಕದ ಮನೆಯ ರೇಡಿಯೋ ಹಾಡಿಗೆ
ಹೋಯಿತು ಮನ
ಜಾರಿದವು ಕನಸುಗಳು
ಜಾರಿದವು ಕನಸುಗಳು.
*****
೧೯೯೮ ರ ಕರ್ಮವೀರ ದೀಪಾವಳಿ ವಿಶೇಷಾಂಕದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ