ಕಡಲಡಿಯಲ್ಲಿ ಧರೆ ಡೋಲು ಬಾರಿಸಿದಾಗ

ಗುಡುಗುಟ್ಟಿದ ಧರೆ
ಕೆರಳಿತು ಸಾಗರ
ಅಪ್ಪಳಿಸುತ ರಾಕ್ಷಸಾಕಾರದ ಸುನಾಮಿ
ಕೊಚ್ಚಿ ಹೋದವು ಮನೆ ಮಠ
ಜಲಸಮಾಧಿಯಾದವು ಜೀವರಾಶಿ

ಕಂದಮ್ಮಗಳ ಸಾವಿನಲ್ಲಿ
ಮುಗಿಲ ಮುಟ್ಟಿದ ಹೆತ್ತೊಡಲ ಕರುಳಿನ
ನೋವು! ಕೇಳುವವರ್‍ಯಾರು?
ಮಾರಣ ಹೋಮ ನಡೆಯಿತು
ಜೀವರಾಶಿಗಳ ಮೇಲೆ

ನೀರ ರಾಶಿಯ ಎದುರು ಕಣ್ಣೀರ ಕಡಲು
ಎಲ್ಲೆಲ್ಲೂ ಮನ ಕರಗುವಂತೆ
ಸಾವುನೋವಿನ ನಡುವೆ ಉಳಿದವರ
ತೊಳಲಾಟ
ಹೃದಯ ಕರಗುವ ಘೋರ ದುರಂತ

ಸಾಗರ ಗರ್‍ಭದಲ್ಲಿ ಡೋಲು ಬಾರಿಸಿದರೆ
ಎದೆ ನಡುಗಿತು,
ಕಡಲಲೆಗಳ ಅಬ್ಬರದಲ್ಲಿ ತತ್ತರಿಸಿದವು
ನೆಲಜಲಗಳಲಿ ಅವುಗಳ ರಾಶಿರಾಶಿ

ಭೋರ್‍ಗರೆವ ಕಡಲೇ
ಇನ್ನಾದರೂ ಶಾಂತವಾಗು : ಹೇಳು
ನಿನಗಿಷ್ಟವೇ ಕಳಕೊಂಡವರ ಗೋಳು
ಇನ್ನೆಂದೂ ಬಾರದಿರಲಿ ಇಂಥ ಕ್ರೂರದಿನ
ಓ ಪ್ರಕೃತಿಯೇ ನೀನೇ ಸೃಷ್ಟಿಸಿದ
ಜೀವರ ಮೇಲೆ ಕರುಣೆ ಇರಲಿ,
ಕ್ಷಮೆ ಇರಲಿ ಅಸಹಾಯಕರ ಮೇಲೆ

ಶಾಂತವಾಗು ಶಾಂತವಾಗು ಸಾಗರವೇ
ಸಾಕು ಈ ರುದ್ರ ನರ್ತನ.
*****
ಜನವರಿ ೯, ೨೦೦೫ ಸಾಗರದ ಮಣ್ಣಿನವಾಸನೆ ವಾರಪತ್ರಿಕೆ ಪ್ರಕಟ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಯ್ಯೋ ಪಾಪ
Next post ಕಲಾವಿದ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys