Home / ಕವನ / ಕವಿತೆ / ಪರಿವರ್‍ತನೆ

ಪರಿವರ್‍ತನೆ

ಗ್ರೀಷ್ಮ ಋತು
ತಾಪದ ಪ್ರಖರತೆಯ ಪ್ರತೀಕ
ಜಗದ ಜೀವಿಗಳಿಗೆ ಬೇಕ
ಮರಗಿಡ ಬಳ್ಳಿಗಳಾಶ್ರಯ

ದಾಹವ ನೀಗಿಸಿಕೊಳ್ಳಲು
ಸರ್‍ಪದ ಹೆಡೆಯ ನೆರಳಲಿ
ಕಪ್ಪೆಯೊಂದು ವಿರಮಿಸಿದಂತೆ
ಶತೃಮಿತ್ರರೊಂದಾಗುವರು

ಇದುವೇ ಗ್ರೀಷ್ಮನ ಪ್ರಭಾವ
ಮಾವು ಬೇವು ಚಿಗುರೊಡೆದು
ಉಸಿರಿಗೆ ಉಸಿರು
ಬೇವು ಬೆಲ್ಲಗಳ ಸಂಮಿಶ್ರಣ

ಸುಖ ದುಃಖಗಳ ದುಮ್ಮಾನ
ಬದುಕಿನ ಚಿತ್ರಣವೇ
ಚೈತ್ರದ ಜಾಣ್ಮೆಯ ಸೊಬಗು
ಹೊಂಗನಸಿನಲಿ ಹೊಸವರ್‍ಷ
ಹರುಷ ತರಲೆಂದು
ಬರುತಿದೆ ಪ್ರತಿಯುಗಾದಿ

ಚೈತ್ರದ ಗಾಳಿ ಬೀಸುತಿರಲು
ನಿಯಮಾವಳಿಗಳೆಲ್ಲ ಗಾಳಿಗೆ ತೂರುತಿರಲು
ಹಣ್ಣೆಲೆ ಉದುರಿ ತರಗೆಲೆ ಹಾರುತಿರಲು
ಚಿಗುರು ಸಂತಸದಿ ಇಣುಕುತಿರಲು

ಪ್ರೀತಿಯ ಆಯ್ಕೆ
ನನಗೂ ನಿನಗೂ
ಎದಕೂ ಉಂಟು

ಶೃಂಗಾರ ಮಾಸವೇ ಹೀಗೆ
ವಸಂತದ ವೈಭವದಲಿ
ಎದುರಾಳಿಗಳೇ ಇಲ್ಲದ ಮನಸು
ಹಳತು ಹೊಸತು ನೆಪಗಳು
ನಿಲ್ಲುವವು ಅಂಚಿನಲಿ ಸುರುಳಿಬಿಚ್ಚಿ
*****
ಸಾಗರದ ವಾರಪತ್ರಿಕೆ ‘ಸಾಗರ ಸುತ್ತ’ ವಿಶೇಷಾಂಕದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...