ಪರಿವರ್‍ತನೆ

ಗ್ರೀಷ್ಮ ಋತು
ತಾಪದ ಪ್ರಖರತೆಯ ಪ್ರತೀಕ
ಜಗದ ಜೀವಿಗಳಿಗೆ ಬೇಕ
ಮರಗಿಡ ಬಳ್ಳಿಗಳಾಶ್ರಯ

ದಾಹವ ನೀಗಿಸಿಕೊಳ್ಳಲು
ಸರ್‍ಪದ ಹೆಡೆಯ ನೆರಳಲಿ
ಕಪ್ಪೆಯೊಂದು ವಿರಮಿಸಿದಂತೆ
ಶತೃಮಿತ್ರರೊಂದಾಗುವರು

ಇದುವೇ ಗ್ರೀಷ್ಮನ ಪ್ರಭಾವ
ಮಾವು ಬೇವು ಚಿಗುರೊಡೆದು
ಉಸಿರಿಗೆ ಉಸಿರು
ಬೇವು ಬೆಲ್ಲಗಳ ಸಂಮಿಶ್ರಣ

ಸುಖ ದುಃಖಗಳ ದುಮ್ಮಾನ
ಬದುಕಿನ ಚಿತ್ರಣವೇ
ಚೈತ್ರದ ಜಾಣ್ಮೆಯ ಸೊಬಗು
ಹೊಂಗನಸಿನಲಿ ಹೊಸವರ್‍ಷ
ಹರುಷ ತರಲೆಂದು
ಬರುತಿದೆ ಪ್ರತಿಯುಗಾದಿ

ಚೈತ್ರದ ಗಾಳಿ ಬೀಸುತಿರಲು
ನಿಯಮಾವಳಿಗಳೆಲ್ಲ ಗಾಳಿಗೆ ತೂರುತಿರಲು
ಹಣ್ಣೆಲೆ ಉದುರಿ ತರಗೆಲೆ ಹಾರುತಿರಲು
ಚಿಗುರು ಸಂತಸದಿ ಇಣುಕುತಿರಲು

ಪ್ರೀತಿಯ ಆಯ್ಕೆ
ನನಗೂ ನಿನಗೂ
ಎದಕೂ ಉಂಟು

ಶೃಂಗಾರ ಮಾಸವೇ ಹೀಗೆ
ವಸಂತದ ವೈಭವದಲಿ
ಎದುರಾಳಿಗಳೇ ಇಲ್ಲದ ಮನಸು
ಹಳತು ಹೊಸತು ನೆಪಗಳು
ನಿಲ್ಲುವವು ಅಂಚಿನಲಿ ಸುರುಳಿಬಿಚ್ಚಿ
*****
ಸಾಗರದ ವಾರಪತ್ರಿಕೆ ‘ಸಾಗರ ಸುತ್ತ’ ವಿಶೇಷಾಂಕದಲ್ಲಿ ಪ್ರಕಟ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೩೭
Next post ಪ್ರೀತಿ ಎಂಬ ಹೂದೋಟದಲ್ಲಿ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…