Home / ಕವನ / ಕವಿತೆ / ಬಳೆ ಸರವಲ್ಲ

ಬಳೆ ಸರವಲ್ಲ

ಕೇಳಿರೈ ಸಭಾ ಬೆನ್ನೆಲವುಗಳೇ
ತಮಗೆದೆಗಾರ್‍ಕಿದ್ದೊಡೆ
ಎನ್ನ ಕಾವ್ಯವಂ ಮನದಲಿ ಪಠಿಸಿರೈ

ನಿಲ್ಲು, ನಿಲ್ಲು, ಎಲೈ ಪಂಡಿತೋತ್ತಮನೇ
ನಿನ್ನ ಕಾವ್ಯದಲ್ಲೇನಿಹುದು?
ಮೈ ಮುಚ್ಚುವುದೋ? ಉದರ ತುಂಬುವುದೋ
ಮೈ ಮೇಲಿನ ಆಭರಣವಾಗುವುದೋ
ನೀ ನುಡಿಯದಿರು ಅಹಂನಲಿ

ಹೌದು! ಎನಗಿಹುದು ಅಹಂ
ಪ್ರತಿಭೆ ಎನ್ನ ಮೈ ತುಂಬಿಹುದು ಕಾಣಾ
ರೋಮ ರೋಮಗಳಲ್ಲರಳಿಹುದು ಸಾಹಿತ್ಯ
ಎನಗುಂಟು ಲೆಕ್ಕಣಿಕೆ
ಅದರೋಳ್ ತುಂಬಿಹುದು ಸಾಹಿತ್ಯದಾ ಕಡಲು

ಕಾಂಚಾಣ ಅಡಗಿಹುದು ನಿನ್ನಲಿ
ನಿನಗರಿವಿಲ್ಲದೇ ನಿನ್ನಾ ಸುಡುತಿಹುದು ಕಾಣಾ
ಒಮ್ಮೆ ನಿನ್ನಲಿ ಮತ್ತೊಮ್ಮಿನ್ನೊಬ್ಬರಲಿ
ತುರುಗದಂತಾಡದಿರು ದುರಹಂಕಾರದಲಿ
ಸಾಂಸ್ಕೃತಿಕ ವೇದಿಕೆಯನೆಂದೂ ಧಿಕ್ಕರಿಸದಿರು
ಸಾಹಿತಿಗಳ ತಿರಸ್ಕಾರ ಸಲ್ಲದು
ಲೋಕದ ಮನ್ನಣೆ ಸಿಗದು ಕಾಣ

ನಾವ್ ಸರಸತಿ ಸುಪುತ್ರರು
ಎಮಗೆ ಈ ರಾಜ್ಯವೇನ್? ಬೇರಾವರಾಜ್ಯವೇನ್
ಸಿಗುವುದೆಲ್ಲೆಲ್ಲಾ ಮಾನ ಸಂಮಾನ

ಎಲೈ ಅಜ್ಞಾನಿ ಕೇಳು
ಸಾಹಿತ್ಯವೆಂಬುದು ಸಂತೆಯಲ್ಲಿ ಮಾರಿ
ಲಾಭ ತರುವ ಸರಬಳೆಯಲ್ಲ ಮೂಢ

ಎಲೈ ಮರುಳೆ ಅದು ಅಶಾಶ್ವತ
ಸಾಹಿತ್ಯ ಲೋಕದೋಳ್ ಮಿಂದವನೆ ಅಮರ
ಇದು ಹೆಡ್ಡನಿಗೆಂದೂ ತಿಳಿಯದು ಕಾಣಾ

ನಿಜವನ್ನರಿತು ಸಾಹಿತ್ಯ
ಸವಿಯನು ಭಾವವನು ಅರಿ
ನೀನಾಗುವಿ ಛವಿ ನೀನಾಗುವಿ ಛವಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...