Home / ಕವನ / ಕವಿತೆ / ಬಳೆ ಸರವಲ್ಲ

ಬಳೆ ಸರವಲ್ಲ

ಕೇಳಿರೈ ಸಭಾ ಬೆನ್ನೆಲವುಗಳೇ
ತಮಗೆದೆಗಾರ್‍ಕಿದ್ದೊಡೆ
ಎನ್ನ ಕಾವ್ಯವಂ ಮನದಲಿ ಪಠಿಸಿರೈ

ನಿಲ್ಲು, ನಿಲ್ಲು, ಎಲೈ ಪಂಡಿತೋತ್ತಮನೇ
ನಿನ್ನ ಕಾವ್ಯದಲ್ಲೇನಿಹುದು?
ಮೈ ಮುಚ್ಚುವುದೋ? ಉದರ ತುಂಬುವುದೋ
ಮೈ ಮೇಲಿನ ಆಭರಣವಾಗುವುದೋ
ನೀ ನುಡಿಯದಿರು ಅಹಂನಲಿ

ಹೌದು! ಎನಗಿಹುದು ಅಹಂ
ಪ್ರತಿಭೆ ಎನ್ನ ಮೈ ತುಂಬಿಹುದು ಕಾಣಾ
ರೋಮ ರೋಮಗಳಲ್ಲರಳಿಹುದು ಸಾಹಿತ್ಯ
ಎನಗುಂಟು ಲೆಕ್ಕಣಿಕೆ
ಅದರೋಳ್ ತುಂಬಿಹುದು ಸಾಹಿತ್ಯದಾ ಕಡಲು

ಕಾಂಚಾಣ ಅಡಗಿಹುದು ನಿನ್ನಲಿ
ನಿನಗರಿವಿಲ್ಲದೇ ನಿನ್ನಾ ಸುಡುತಿಹುದು ಕಾಣಾ
ಒಮ್ಮೆ ನಿನ್ನಲಿ ಮತ್ತೊಮ್ಮಿನ್ನೊಬ್ಬರಲಿ
ತುರುಗದಂತಾಡದಿರು ದುರಹಂಕಾರದಲಿ
ಸಾಂಸ್ಕೃತಿಕ ವೇದಿಕೆಯನೆಂದೂ ಧಿಕ್ಕರಿಸದಿರು
ಸಾಹಿತಿಗಳ ತಿರಸ್ಕಾರ ಸಲ್ಲದು
ಲೋಕದ ಮನ್ನಣೆ ಸಿಗದು ಕಾಣ

ನಾವ್ ಸರಸತಿ ಸುಪುತ್ರರು
ಎಮಗೆ ಈ ರಾಜ್ಯವೇನ್? ಬೇರಾವರಾಜ್ಯವೇನ್
ಸಿಗುವುದೆಲ್ಲೆಲ್ಲಾ ಮಾನ ಸಂಮಾನ

ಎಲೈ ಅಜ್ಞಾನಿ ಕೇಳು
ಸಾಹಿತ್ಯವೆಂಬುದು ಸಂತೆಯಲ್ಲಿ ಮಾರಿ
ಲಾಭ ತರುವ ಸರಬಳೆಯಲ್ಲ ಮೂಢ

ಎಲೈ ಮರುಳೆ ಅದು ಅಶಾಶ್ವತ
ಸಾಹಿತ್ಯ ಲೋಕದೋಳ್ ಮಿಂದವನೆ ಅಮರ
ಇದು ಹೆಡ್ಡನಿಗೆಂದೂ ತಿಳಿಯದು ಕಾಣಾ

ನಿಜವನ್ನರಿತು ಸಾಹಿತ್ಯ
ಸವಿಯನು ಭಾವವನು ಅರಿ
ನೀನಾಗುವಿ ಛವಿ ನೀನಾಗುವಿ ಛವಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...