ಬಳೆ ಸರವಲ್ಲ

ಕೇಳಿರೈ ಸಭಾ ಬೆನ್ನೆಲವುಗಳೇ
ತಮಗೆದೆಗಾರ್‍ಕಿದ್ದೊಡೆ
ಎನ್ನ ಕಾವ್ಯವಂ ಮನದಲಿ ಪಠಿಸಿರೈ

ನಿಲ್ಲು, ನಿಲ್ಲು, ಎಲೈ ಪಂಡಿತೋತ್ತಮನೇ
ನಿನ್ನ ಕಾವ್ಯದಲ್ಲೇನಿಹುದು?
ಮೈ ಮುಚ್ಚುವುದೋ? ಉದರ ತುಂಬುವುದೋ
ಮೈ ಮೇಲಿನ ಆಭರಣವಾಗುವುದೋ
ನೀ ನುಡಿಯದಿರು ಅಹಂನಲಿ

ಹೌದು! ಎನಗಿಹುದು ಅಹಂ
ಪ್ರತಿಭೆ ಎನ್ನ ಮೈ ತುಂಬಿಹುದು ಕಾಣಾ
ರೋಮ ರೋಮಗಳಲ್ಲರಳಿಹುದು ಸಾಹಿತ್ಯ
ಎನಗುಂಟು ಲೆಕ್ಕಣಿಕೆ
ಅದರೋಳ್ ತುಂಬಿಹುದು ಸಾಹಿತ್ಯದಾ ಕಡಲು

ಕಾಂಚಾಣ ಅಡಗಿಹುದು ನಿನ್ನಲಿ
ನಿನಗರಿವಿಲ್ಲದೇ ನಿನ್ನಾ ಸುಡುತಿಹುದು ಕಾಣಾ
ಒಮ್ಮೆ ನಿನ್ನಲಿ ಮತ್ತೊಮ್ಮಿನ್ನೊಬ್ಬರಲಿ
ತುರುಗದಂತಾಡದಿರು ದುರಹಂಕಾರದಲಿ
ಸಾಂಸ್ಕೃತಿಕ ವೇದಿಕೆಯನೆಂದೂ ಧಿಕ್ಕರಿಸದಿರು
ಸಾಹಿತಿಗಳ ತಿರಸ್ಕಾರ ಸಲ್ಲದು
ಲೋಕದ ಮನ್ನಣೆ ಸಿಗದು ಕಾಣ

ನಾವ್ ಸರಸತಿ ಸುಪುತ್ರರು
ಎಮಗೆ ಈ ರಾಜ್ಯವೇನ್? ಬೇರಾವರಾಜ್ಯವೇನ್
ಸಿಗುವುದೆಲ್ಲೆಲ್ಲಾ ಮಾನ ಸಂಮಾನ

ಎಲೈ ಅಜ್ಞಾನಿ ಕೇಳು
ಸಾಹಿತ್ಯವೆಂಬುದು ಸಂತೆಯಲ್ಲಿ ಮಾರಿ
ಲಾಭ ತರುವ ಸರಬಳೆಯಲ್ಲ ಮೂಢ

ಎಲೈ ಮರುಳೆ ಅದು ಅಶಾಶ್ವತ
ಸಾಹಿತ್ಯ ಲೋಕದೋಳ್ ಮಿಂದವನೆ ಅಮರ
ಇದು ಹೆಡ್ಡನಿಗೆಂದೂ ತಿಳಿಯದು ಕಾಣಾ

ನಿಜವನ್ನರಿತು ಸಾಹಿತ್ಯ
ಸವಿಯನು ಭಾವವನು ಅರಿ
ನೀನಾಗುವಿ ಛವಿ ನೀನಾಗುವಿ ಛವಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೋಸ್ಟ್‌ ಗ್ರ್‍ಯಾಡುಯೇಶನ್
Next post ವಿಧಿಯ ಆಟ (ಪ್ರಾಪ್ತಿ)

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…