ಬಳೆ ಸರವಲ್ಲ

ಕೇಳಿರೈ ಸಭಾ ಬೆನ್ನೆಲವುಗಳೇ
ತಮಗೆದೆಗಾರ್‍ಕಿದ್ದೊಡೆ
ಎನ್ನ ಕಾವ್ಯವಂ ಮನದಲಿ ಪಠಿಸಿರೈ

ನಿಲ್ಲು, ನಿಲ್ಲು, ಎಲೈ ಪಂಡಿತೋತ್ತಮನೇ
ನಿನ್ನ ಕಾವ್ಯದಲ್ಲೇನಿಹುದು?
ಮೈ ಮುಚ್ಚುವುದೋ? ಉದರ ತುಂಬುವುದೋ
ಮೈ ಮೇಲಿನ ಆಭರಣವಾಗುವುದೋ
ನೀ ನುಡಿಯದಿರು ಅಹಂನಲಿ

ಹೌದು! ಎನಗಿಹುದು ಅಹಂ
ಪ್ರತಿಭೆ ಎನ್ನ ಮೈ ತುಂಬಿಹುದು ಕಾಣಾ
ರೋಮ ರೋಮಗಳಲ್ಲರಳಿಹುದು ಸಾಹಿತ್ಯ
ಎನಗುಂಟು ಲೆಕ್ಕಣಿಕೆ
ಅದರೋಳ್ ತುಂಬಿಹುದು ಸಾಹಿತ್ಯದಾ ಕಡಲು

ಕಾಂಚಾಣ ಅಡಗಿಹುದು ನಿನ್ನಲಿ
ನಿನಗರಿವಿಲ್ಲದೇ ನಿನ್ನಾ ಸುಡುತಿಹುದು ಕಾಣಾ
ಒಮ್ಮೆ ನಿನ್ನಲಿ ಮತ್ತೊಮ್ಮಿನ್ನೊಬ್ಬರಲಿ
ತುರುಗದಂತಾಡದಿರು ದುರಹಂಕಾರದಲಿ
ಸಾಂಸ್ಕೃತಿಕ ವೇದಿಕೆಯನೆಂದೂ ಧಿಕ್ಕರಿಸದಿರು
ಸಾಹಿತಿಗಳ ತಿರಸ್ಕಾರ ಸಲ್ಲದು
ಲೋಕದ ಮನ್ನಣೆ ಸಿಗದು ಕಾಣ

ನಾವ್ ಸರಸತಿ ಸುಪುತ್ರರು
ಎಮಗೆ ಈ ರಾಜ್ಯವೇನ್? ಬೇರಾವರಾಜ್ಯವೇನ್
ಸಿಗುವುದೆಲ್ಲೆಲ್ಲಾ ಮಾನ ಸಂಮಾನ

ಎಲೈ ಅಜ್ಞಾನಿ ಕೇಳು
ಸಾಹಿತ್ಯವೆಂಬುದು ಸಂತೆಯಲ್ಲಿ ಮಾರಿ
ಲಾಭ ತರುವ ಸರಬಳೆಯಲ್ಲ ಮೂಢ

ಎಲೈ ಮರುಳೆ ಅದು ಅಶಾಶ್ವತ
ಸಾಹಿತ್ಯ ಲೋಕದೋಳ್ ಮಿಂದವನೆ ಅಮರ
ಇದು ಹೆಡ್ಡನಿಗೆಂದೂ ತಿಳಿಯದು ಕಾಣಾ

ನಿಜವನ್ನರಿತು ಸಾಹಿತ್ಯ
ಸವಿಯನು ಭಾವವನು ಅರಿ
ನೀನಾಗುವಿ ಛವಿ ನೀನಾಗುವಿ ಛವಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೋಸ್ಟ್‌ ಗ್ರ್‍ಯಾಡುಯೇಶನ್
Next post ವಿಧಿಯ ಆಟ (ಪ್ರಾಪ್ತಿ)

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys