Home / ಕವನ / ಕವಿತೆ / ಪ್ರೀತಿಯ ಟೈಲರ್

ಪ್ರೀತಿಯ ಟೈಲರ್

ಗೆಳೆಯ ಟೈಲರ್ ಇದ್ದ ಆರೂವರೆ ಅಡಿ
ವಿರಗಿ ವಿರಾಹಿ ನಿರಾಶಾವಾದಿ
ಕಳೆದಿಹನು ಏಳೂವರೆ ದಶಕ
ವಾಕಿಂಗು, ಜಾಗಿಂಗ್‌ನಲಿ ಬೆರೆಯುತ್ತಿದ್ದನೆಲ್ಲರ
ಅನುಮಾನದಿ ಕಾಣುತ್ತಿದ್ದ ಅವರಿವರನು
ಆದರೂ ನಂಬಿ ಇವನ ಬಳಿ
ಸುಳಿವ ಗಿರಾಕಿ ಸ್ನೇಹಿತರನೇಕರು

ಸಮಯಕೆ ಅಂಗಿ ಹೊಲಿದು ಕೊಡಲಿಲ್ಲೆಂದು
ಹೋದವರೆಷ್ಟೋ ಗಿರಾಕಿಗಳು ಕೋಪ ತಾಪದಲಿ
ಸಮಯಕೆ ಬಟ್ಟೆ ಕೊಡುವ ಪರಿಯಿಲ್ಲೆಂದರು
ಪೇಟೆಯವರಷ್ಟೇ ಅಲ್ಲ ಹಳ್ಳಿಯವರೂ
ಬಾರಿ ಬಾರಿ ಕನಲಿ ಪ್ರೀತಿಯಲಿ
ಇವ ಹೊಲಿದಂಗಿಯೇ ಬೇಕೆನ್ನುವರು

ಎಲ್ಲರಂತಿವನಲ್ಲ ಈ ಟೈಲರ್
ಭೀಮಣ್ಣ, ರಘಣ್ಣ, ಮಲ್ಲಿಕಣ್ಣ, ಶ್ರೀಧರ
ಗುಡಿಗಾರ ನಾರಾಯಣಪ್ಪ, ಪ್ರಕಾಶ್‌, ಸೇನಾಪತಿ
ಹೀಗೆ ಅನೇಕರ ಸ್ನೇಹ ಮಾಡಿದ
ಇವ ಯಾರ ಹಂಗಿಲ್ಲದಂತಿದ್ದ
ಆದರಿವ ಟೈಲರೊಳಗುತ್ತಮ ಟೈಲರ್
ಸದಾ ಹೂವಿನಂತೆ ಹಸನ್ಮುಖಿ
ನಡು ನಡುವೆ ಒಮ್ಮೊಮ್ಮೆ ಸಿಡುಕುತ್ತಿದ್ದ
ಆದರೂ ನಮ್ಮೆಲ್ಲರ ಪ್ರೀತಿಯ ಟೈಲರ್

ಎಳೆಯರ ಹಿರಿಯರ, ಹೆಂಗಳೆಯರ
ಮನವ ಗೆಲಿದಿಹನು ನಮ್ರ ಮಾತಿನಲಿ
ನೇರ ನಡೆ ನುಡಿಯುವನೀತ ತೀಕ್ಷಣದಲಿ
ಜೀವನದಲಿ ಹಿಗ್ಗರಿಸಿ ಮುಗ್ಗರಿಸಿ
ಗಿರಾಕಿಗಳ ರಂಜಿಸಿ ಪ್ರೀತಿಯ ಕಾಣುತಲಿ
ಸಲ್ಲಿಸುತಿಹನು ಉಚಿತ ಸೇವೆಯ

ಶವದ ಚೀಲ ಹೊಲಿದು ಕೊಡುತ
ಕಾಗೆಗಳಿಗೆ ಬ್ರೆಡ್‌ ಮಂಡಕ್ಕಿ ಹಾಕುತ
ಕಾಗೆಗಳೊಂದಿಗೆ ಪ್ರೀತಿಯ ಗಳಿಸಿದ

ಇವ ಎಲ್ಲರಿಗೂ ಮಾದರಿ ಟೈಲರ್
ಸಾಗರದ ಎಸ್ಸೆನ್ ನಗರದಲ್ಲೊಂದು
ಖರೀದಿಸಿದ ನಿವೇಶನದಲಿ
ವಾಸ ಮಾಡ ತೊಡಗಿದ
ಚಿಕ್ಕದಾದ ಚೊಕ್ಕದಾದ ಎರಡು
ರೂಮಿನ ಮನೆಯ ಕಟ್ಟಿಸಿ

ವಯಸ್ಸು ನಿಲ್ಲುವುದೇ
ಆರೋಗ್ಯ ಹದಗೆಟ್ಟಿತು ಒಂಟಿ ಜೀವಕೆ
ಅಂದುರಾತ್ರಿ ಹನ್ನೆರಡು ಬಡಿದಿತ್ತು
ಓಡಿದ ಗೆಳೆಯ ಮಲ್ಲಿಕಣ್ಣನ ಮನೆಗೆ
ಹೊಟ್ಟೆ ಸರಿಯಿಲ್ಲೆಂದ ಸೀರಿಯಸ್ಸೆಂದ ಅವನೆಬ್ಬಿಸಿ
ಸರಿ, ನಡೆ ಎಂದವನ ಸೇರಿಸಿದರು
ಆಸ್ಪತ್ರೆಗೆ ಸರಿರಾತ್ರಿಯಲಿ

ಶ್ರೀಧರನ ಕರೆಸಿದರೂ ಜಗ್ಗಲಿಲ್ಲ
ಭೀಮಣ್ಣನ, ರಘಣ್ಣನ ಕರೆಯಿಸಿದರು
ಸ್ನೇಹಿತನ ಸಹಾಯಕ್ಕೆ ಧಾವಿಸಿದರೆಲ್ಲರೂ
ಬೆಂಗಳೂರಿನಲ್ಲಿದ್ದ ಹೆಂಡತಿ ಮಕ್ಕಳಿಗೆ
ಫೋನಾಯಿಸಿದರು ಆದೀತೆಂದು ಹೆಚ್ಚು ಕಡಿಮೆ
ಬಂದ ಬಂಧುಗಳು ಕರೆದೊಯ್ದರು
ಅಲ್ಲಿಯೂ ಅವರನ್ನು ಕಂಡ ಅನುಮಾನದಿ

ಒಂದು ದಿನ ಇದ್ದಕ್ಕಿದ್ದಂತೆ ಇವ ಮಾಯ
ಗಾಬರಿ ಮನೆಯವರೆಲ್ಲ
ಎಲ್ಲಿ ಹೋದರೆಂದು ತಿಳಿಯಲಿಲ್ಲ
ನೀಡಿದರು ಕಂಪ್ಲೆಂಟು
ಎಷ್ಟು ಹುಡುಕಿದರೂ
ಪ್ರೀತಿಯ ಟೈಲರ್ ಸಿಗಲೇ ಇಲ್ಲ

ಯಾರಿಗೂ ತಿಳಿಸದೇ ಸೇರಿದ್ದ ವೃದ್ಧಾಶ್ರಮ
ನಾನು ಅನಾಥ ನನಗೆ ಯಾರೂ ಇಲ್ಲೆಂದ
ಅಲ್ಲಿಯೂ ತರಲೆ ಸಿಡುಕುತನ ಜಗಳ
ಅರೆ ಹುಚ್ಚುತನದಲಿ ಆಗಿಬಿಟ್ಟ ಪ್ರೀತಿಯ ಟೈಲರ್

‘ನನ್ನ ತಮ್ಮ ರಮೇಶ
ಶಿಕಾರಿಪುರದಲಿ ಪೋಲೀಸ್‌ ಎಂದು’
ಬಿಟ್ಟ ಬಾಯಿ ಈ ಟೈಲರ್
ತಮ್ಮನ ಕರೆಯಿಸಿ ಅವನಿಗೊಪ್ಪಿಸಿದರು
ಅಂತೂ ಮೂವತ್ತೈದು ನಾಲ್ವತ್ತು ವರ್ಷಗಳಿಂದ ಬಿಟ್ಟಿದ್ದ
ಹೆಂಡತಿಯೊಂದಿಗೆ ಸೇರಿಸಿದಾಕ್ಷಣದಲಿ
ಮೋಕ್ಷಕೆ ದಾರಿಯಾಯಿತು ಸುಗಮ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...