Home / ಕವನ / ಕವಿತೆ / ಪ್ರೀತಿಯ ಟೈಲರ್

ಪ್ರೀತಿಯ ಟೈಲರ್

ಗೆಳೆಯ ಟೈಲರ್ ಇದ್ದ ಆರೂವರೆ ಅಡಿ
ವಿರಗಿ ವಿರಾಹಿ ನಿರಾಶಾವಾದಿ
ಕಳೆದಿಹನು ಏಳೂವರೆ ದಶಕ
ವಾಕಿಂಗು, ಜಾಗಿಂಗ್‌ನಲಿ ಬೆರೆಯುತ್ತಿದ್ದನೆಲ್ಲರ
ಅನುಮಾನದಿ ಕಾಣುತ್ತಿದ್ದ ಅವರಿವರನು
ಆದರೂ ನಂಬಿ ಇವನ ಬಳಿ
ಸುಳಿವ ಗಿರಾಕಿ ಸ್ನೇಹಿತರನೇಕರು

ಸಮಯಕೆ ಅಂಗಿ ಹೊಲಿದು ಕೊಡಲಿಲ್ಲೆಂದು
ಹೋದವರೆಷ್ಟೋ ಗಿರಾಕಿಗಳು ಕೋಪ ತಾಪದಲಿ
ಸಮಯಕೆ ಬಟ್ಟೆ ಕೊಡುವ ಪರಿಯಿಲ್ಲೆಂದರು
ಪೇಟೆಯವರಷ್ಟೇ ಅಲ್ಲ ಹಳ್ಳಿಯವರೂ
ಬಾರಿ ಬಾರಿ ಕನಲಿ ಪ್ರೀತಿಯಲಿ
ಇವ ಹೊಲಿದಂಗಿಯೇ ಬೇಕೆನ್ನುವರು

ಎಲ್ಲರಂತಿವನಲ್ಲ ಈ ಟೈಲರ್
ಭೀಮಣ್ಣ, ರಘಣ್ಣ, ಮಲ್ಲಿಕಣ್ಣ, ಶ್ರೀಧರ
ಗುಡಿಗಾರ ನಾರಾಯಣಪ್ಪ, ಪ್ರಕಾಶ್‌, ಸೇನಾಪತಿ
ಹೀಗೆ ಅನೇಕರ ಸ್ನೇಹ ಮಾಡಿದ
ಇವ ಯಾರ ಹಂಗಿಲ್ಲದಂತಿದ್ದ
ಆದರಿವ ಟೈಲರೊಳಗುತ್ತಮ ಟೈಲರ್
ಸದಾ ಹೂವಿನಂತೆ ಹಸನ್ಮುಖಿ
ನಡು ನಡುವೆ ಒಮ್ಮೊಮ್ಮೆ ಸಿಡುಕುತ್ತಿದ್ದ
ಆದರೂ ನಮ್ಮೆಲ್ಲರ ಪ್ರೀತಿಯ ಟೈಲರ್

ಎಳೆಯರ ಹಿರಿಯರ, ಹೆಂಗಳೆಯರ
ಮನವ ಗೆಲಿದಿಹನು ನಮ್ರ ಮಾತಿನಲಿ
ನೇರ ನಡೆ ನುಡಿಯುವನೀತ ತೀಕ್ಷಣದಲಿ
ಜೀವನದಲಿ ಹಿಗ್ಗರಿಸಿ ಮುಗ್ಗರಿಸಿ
ಗಿರಾಕಿಗಳ ರಂಜಿಸಿ ಪ್ರೀತಿಯ ಕಾಣುತಲಿ
ಸಲ್ಲಿಸುತಿಹನು ಉಚಿತ ಸೇವೆಯ

ಶವದ ಚೀಲ ಹೊಲಿದು ಕೊಡುತ
ಕಾಗೆಗಳಿಗೆ ಬ್ರೆಡ್‌ ಮಂಡಕ್ಕಿ ಹಾಕುತ
ಕಾಗೆಗಳೊಂದಿಗೆ ಪ್ರೀತಿಯ ಗಳಿಸಿದ

ಇವ ಎಲ್ಲರಿಗೂ ಮಾದರಿ ಟೈಲರ್
ಸಾಗರದ ಎಸ್ಸೆನ್ ನಗರದಲ್ಲೊಂದು
ಖರೀದಿಸಿದ ನಿವೇಶನದಲಿ
ವಾಸ ಮಾಡ ತೊಡಗಿದ
ಚಿಕ್ಕದಾದ ಚೊಕ್ಕದಾದ ಎರಡು
ರೂಮಿನ ಮನೆಯ ಕಟ್ಟಿಸಿ

ವಯಸ್ಸು ನಿಲ್ಲುವುದೇ
ಆರೋಗ್ಯ ಹದಗೆಟ್ಟಿತು ಒಂಟಿ ಜೀವಕೆ
ಅಂದುರಾತ್ರಿ ಹನ್ನೆರಡು ಬಡಿದಿತ್ತು
ಓಡಿದ ಗೆಳೆಯ ಮಲ್ಲಿಕಣ್ಣನ ಮನೆಗೆ
ಹೊಟ್ಟೆ ಸರಿಯಿಲ್ಲೆಂದ ಸೀರಿಯಸ್ಸೆಂದ ಅವನೆಬ್ಬಿಸಿ
ಸರಿ, ನಡೆ ಎಂದವನ ಸೇರಿಸಿದರು
ಆಸ್ಪತ್ರೆಗೆ ಸರಿರಾತ್ರಿಯಲಿ

ಶ್ರೀಧರನ ಕರೆಸಿದರೂ ಜಗ್ಗಲಿಲ್ಲ
ಭೀಮಣ್ಣನ, ರಘಣ್ಣನ ಕರೆಯಿಸಿದರು
ಸ್ನೇಹಿತನ ಸಹಾಯಕ್ಕೆ ಧಾವಿಸಿದರೆಲ್ಲರೂ
ಬೆಂಗಳೂರಿನಲ್ಲಿದ್ದ ಹೆಂಡತಿ ಮಕ್ಕಳಿಗೆ
ಫೋನಾಯಿಸಿದರು ಆದೀತೆಂದು ಹೆಚ್ಚು ಕಡಿಮೆ
ಬಂದ ಬಂಧುಗಳು ಕರೆದೊಯ್ದರು
ಅಲ್ಲಿಯೂ ಅವರನ್ನು ಕಂಡ ಅನುಮಾನದಿ

ಒಂದು ದಿನ ಇದ್ದಕ್ಕಿದ್ದಂತೆ ಇವ ಮಾಯ
ಗಾಬರಿ ಮನೆಯವರೆಲ್ಲ
ಎಲ್ಲಿ ಹೋದರೆಂದು ತಿಳಿಯಲಿಲ್ಲ
ನೀಡಿದರು ಕಂಪ್ಲೆಂಟು
ಎಷ್ಟು ಹುಡುಕಿದರೂ
ಪ್ರೀತಿಯ ಟೈಲರ್ ಸಿಗಲೇ ಇಲ್ಲ

ಯಾರಿಗೂ ತಿಳಿಸದೇ ಸೇರಿದ್ದ ವೃದ್ಧಾಶ್ರಮ
ನಾನು ಅನಾಥ ನನಗೆ ಯಾರೂ ಇಲ್ಲೆಂದ
ಅಲ್ಲಿಯೂ ತರಲೆ ಸಿಡುಕುತನ ಜಗಳ
ಅರೆ ಹುಚ್ಚುತನದಲಿ ಆಗಿಬಿಟ್ಟ ಪ್ರೀತಿಯ ಟೈಲರ್

‘ನನ್ನ ತಮ್ಮ ರಮೇಶ
ಶಿಕಾರಿಪುರದಲಿ ಪೋಲೀಸ್‌ ಎಂದು’
ಬಿಟ್ಟ ಬಾಯಿ ಈ ಟೈಲರ್
ತಮ್ಮನ ಕರೆಯಿಸಿ ಅವನಿಗೊಪ್ಪಿಸಿದರು
ಅಂತೂ ಮೂವತ್ತೈದು ನಾಲ್ವತ್ತು ವರ್ಷಗಳಿಂದ ಬಿಟ್ಟಿದ್ದ
ಹೆಂಡತಿಯೊಂದಿಗೆ ಸೇರಿಸಿದಾಕ್ಷಣದಲಿ
ಮೋಕ್ಷಕೆ ದಾರಿಯಾಯಿತು ಸುಗಮ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...