Home / ಕವನ / ಕವಿತೆ / ಧರ್‍ಮ ಮತ್ತು ಸೇಡು

ಧರ್‍ಮ ಮತ್ತು ಸೇಡು

ಯುಗ ಯುಗಗಳು ಕಳೆದರೂ
ನಾವು ಮಾಡಿದ್ದೇನು?
ನಾವು ಸಾಧಿಸಿದ್ದೇನು?

ಹುಟ್ಟು ಹಾಕಿದ್ದೇವೆ
ಎಲ್ಲೆಂದರಲ್ಲಿ ಭಯೋತ್ಪಾದನೆಯ
ಅಂಥ್ರಾಕ್ಸ್ ಮೃತ್ಯುಮಾರಿ
ಜೈವಿಕ ಬಾಂಬಿನ ಅಟ್ಟಹಾಸದಲಿ
ಶಸ್ತ್ರಾಸ್ತ್ರಗಳ ಪೌರುಷವೆಲ್ಲಿ?
ಅಂಥ್ರಾಕ್ಸ್ ಭೀತಿ ಪಸರಿಸಿದೆ ಸೋಂಕಿನಂತೆ
ಚಾಚುತಿದೆ ಕಾಲನ ಕೆನ್ನಾಲಿಗೆ
ಉಗ್ರರ ಅಟ್ಟಹಾಸ ನಿದ್ದೆಗೆಡಿಸಿ
ಬೆಚ್ಚಿ ಬೀಳಿಸುತಿದೆ
ಮಿನುಗುವ ಮುಂಚೆ ಕಮರಿಗೆ
ಹಾಡುವ ಮುನ್ನ ದನಿ ಬತ್ತಿದೆ
ಕವಿತೆ ಬರೆಯುವ ಕೈ ನಿಂತಿದೆ

ಧರ್‍ಮದ ಹೆಸರಿನಲಿ
ನಡೆಸಿದವನೊಬ್ಬ ದುಷ್ಕೃತ್ಯವ
ಇದರ ಸೇಡನು ತೀರಿಸುತಿಹನು
ಸಾಮ್ರಾಜ್ಯ ಶಾಹಿಯೊಬ್ಬ
ಇವರೀರ್‍ವರ
ಯುದ್ಧದ ಮಾರಣ ಹೋಮದಲಿ
ಜಗತ್ತು ಅನುಭವಿಸುತಿದೆ ನರಕಯಾತನೆ
ಬಟ್ಟ ಬಯಲಲಿ ತುತ್ತಿಗಾಗಿ
ಆಸೆಗಣ್ಣುಗಳು ನಿಂತಿವೆ ಕಾಯುತ್ತಾ
ಕನಲಿದ ಮುಗ್ಧ ಮಕ್ಕಳು
ರೋಧಿಸುವ ಹೆಂಗೆಳೆಯರು
ಹಣ್ಣು ಕಣ್ಣುಗಳ ಕಂಡ ಕಲ್ಲೆದೆಯು ಕರಗುತಿದೆ
ಅಲ್ಲಿನ ಜನರ ಪ್ರಾಣ ಸಂಕಟಕೆ
ಸ್ಪಂದಿಸುವವರ್‍ಯಾರು?

ಇದರ ನಡುವೆ ಕೋಮುವಾದ
ಅವರು-ಇವರನು ಅಲ್ಲಲ್ಲ!
ಅವರವರೇ ಕಾದಾಡಲು
ಹಚ್ಚಿಹರು ಕಿಚ್ಚನು

ಪ್ರಾಣ ತೆತ್ತದ್ದು ಗಿಡ ಮರ ಬಳ್ಳಿ
ಧಮನ ಮಾಡುವನೆಂದು ಹೇಳುವರು
ಪುನಃ ಹುಟ್ಟುಹಾಕುವರು
ಧರ್ಮದ ಸೋಗಿನಲಿ ಸೇಡು
ಇದರ ಹಿಂದೆ ಏನು ಅಡಗಿಹುದೋ
ಅಮಾಯಕರಿಗೇನು ತಿಳಿದೀತು
ಆದರೆ!
ನಾವು ಆಗೇವಿ
ಬೆತ್ತಲೆ ಮರದ್ಹಾಂಗ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...