Home / ಕವನ / ಕವಿತೆ / ಧರ್‍ಮ ಮತ್ತು ಸೇಡು

ಧರ್‍ಮ ಮತ್ತು ಸೇಡು

ಯುಗ ಯುಗಗಳು ಕಳೆದರೂ
ನಾವು ಮಾಡಿದ್ದೇನು?
ನಾವು ಸಾಧಿಸಿದ್ದೇನು?

ಹುಟ್ಟು ಹಾಕಿದ್ದೇವೆ
ಎಲ್ಲೆಂದರಲ್ಲಿ ಭಯೋತ್ಪಾದನೆಯ
ಅಂಥ್ರಾಕ್ಸ್ ಮೃತ್ಯುಮಾರಿ
ಜೈವಿಕ ಬಾಂಬಿನ ಅಟ್ಟಹಾಸದಲಿ
ಶಸ್ತ್ರಾಸ್ತ್ರಗಳ ಪೌರುಷವೆಲ್ಲಿ?
ಅಂಥ್ರಾಕ್ಸ್ ಭೀತಿ ಪಸರಿಸಿದೆ ಸೋಂಕಿನಂತೆ
ಚಾಚುತಿದೆ ಕಾಲನ ಕೆನ್ನಾಲಿಗೆ
ಉಗ್ರರ ಅಟ್ಟಹಾಸ ನಿದ್ದೆಗೆಡಿಸಿ
ಬೆಚ್ಚಿ ಬೀಳಿಸುತಿದೆ
ಮಿನುಗುವ ಮುಂಚೆ ಕಮರಿಗೆ
ಹಾಡುವ ಮುನ್ನ ದನಿ ಬತ್ತಿದೆ
ಕವಿತೆ ಬರೆಯುವ ಕೈ ನಿಂತಿದೆ

ಧರ್‍ಮದ ಹೆಸರಿನಲಿ
ನಡೆಸಿದವನೊಬ್ಬ ದುಷ್ಕೃತ್ಯವ
ಇದರ ಸೇಡನು ತೀರಿಸುತಿಹನು
ಸಾಮ್ರಾಜ್ಯ ಶಾಹಿಯೊಬ್ಬ
ಇವರೀರ್‍ವರ
ಯುದ್ಧದ ಮಾರಣ ಹೋಮದಲಿ
ಜಗತ್ತು ಅನುಭವಿಸುತಿದೆ ನರಕಯಾತನೆ
ಬಟ್ಟ ಬಯಲಲಿ ತುತ್ತಿಗಾಗಿ
ಆಸೆಗಣ್ಣುಗಳು ನಿಂತಿವೆ ಕಾಯುತ್ತಾ
ಕನಲಿದ ಮುಗ್ಧ ಮಕ್ಕಳು
ರೋಧಿಸುವ ಹೆಂಗೆಳೆಯರು
ಹಣ್ಣು ಕಣ್ಣುಗಳ ಕಂಡ ಕಲ್ಲೆದೆಯು ಕರಗುತಿದೆ
ಅಲ್ಲಿನ ಜನರ ಪ್ರಾಣ ಸಂಕಟಕೆ
ಸ್ಪಂದಿಸುವವರ್‍ಯಾರು?

ಇದರ ನಡುವೆ ಕೋಮುವಾದ
ಅವರು-ಇವರನು ಅಲ್ಲಲ್ಲ!
ಅವರವರೇ ಕಾದಾಡಲು
ಹಚ್ಚಿಹರು ಕಿಚ್ಚನು

ಪ್ರಾಣ ತೆತ್ತದ್ದು ಗಿಡ ಮರ ಬಳ್ಳಿ
ಧಮನ ಮಾಡುವನೆಂದು ಹೇಳುವರು
ಪುನಃ ಹುಟ್ಟುಹಾಕುವರು
ಧರ್ಮದ ಸೋಗಿನಲಿ ಸೇಡು
ಇದರ ಹಿಂದೆ ಏನು ಅಡಗಿಹುದೋ
ಅಮಾಯಕರಿಗೇನು ತಿಳಿದೀತು
ಆದರೆ!
ನಾವು ಆಗೇವಿ
ಬೆತ್ತಲೆ ಮರದ್ಹಾಂಗ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...