Home / ಕವನ / ಕವಿತೆ / ಬೆವರುಗಳ್ಳರು

ಬೆವರುಗಳ್ಳರು

ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ.
ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ.
ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ.

ಬೆವರದಿದ್ದರೆ-
ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು
ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು
ಮನಕ್ಕೆ ಆನಂದ ಸಿಗಲಾರದು

ಈ ಬೆವರ ಹನಿಗಳು ಅಡೆತಡೆಯಿಲ್ಲದೆ
ಹರಿದು ತಾವು ನಡೆದಾಡುವ ನೆಲವ ನೆನೆಸಿ
ತಂಪುಗೊಳಿಸಿ ಫಲವು ಫಲಿಸಿ
ಮತ್ತೊಬ್ಬರ ಮನವ ತಣಿಸುತಿರೆ….

ಇನ್ನು ಕೆಲವರಲ್ಲಿ ಹೊರ ಬರದ ಬೆವರು
ಒಳಗೊಳಗೆ ಹೆಪ್ಪು ಗಟ್ಟಿ ಮಲಗಿರಲು
ಇಂತಹವರು ಬದುಕನ್ನು
ತಮ್ಮ ಬೆವರಿನಲ್ಲಿ ತೇಲಿಸಲಾರರು
ಬೇರೆಯವರ ಬೆವರಿನಲ್ಲಿ ಅಟ್ಟಹಾಸದಿಂದ
ಕೇಕೆ ಹಾಕಿ ಕುಣಿಯುತ್ತಾರೆ ಬದುಕುತ್ತಾರೆ ಕೂಡ

ಈ ದೇಹದಲ್ಲಿ ರಕ್ತ ಬೆವರು ಬೇರೆ ಬೇರೆ
ಶುದ್ಧ ರಕ್ತಕೆ ಸುರಿಯಲೇಬೇಕು ಬೆವರು ಹೊರಗೆ
ಎಷ್ಟೋ ಜನ ಗುಲಾಮರು ಕೂಲಿ ಕಾರ್ಮಿಕರು ರೈತರು
ಬೆವರುವುದೇ ಬದುಕೆಂದು ತಿಳಿದು
ಅದರಲ್ಲೇ ಹೂತು ಹೋಗಿದ್ದಾರೆ

ಒಂದು ಚೂರು ಬೆವರದ ದೇವರು
ಬ್ರಹ್ಮಜ್ಞಾನಿಗಳೂ ಏಸಿ ರೂಮಿನಲ್ಲಿ ಕುಳಿತವರು
ರಾಜಕೀಯ ಮಂದಿಗಳಿಗೇನು ತಿಳಿದೀತು
ಬೆವರ ಮಹಿಮೆ ಬೆವರ ಬೆಲೆ

ಬೆವರ ಸುರಿಸದವರು ಸೃಷ್ಟಿಸಿದ ಧರ್ಮಗ್ರಂಥಗಳು
ಬೆವರ ಹನಿಗಳಿಗೆ ನೇಣಾದವು ಕುಣಿಕೆಯಾದವು
ಅನ್ನ ಸೃಷ್ಟಿಸುವ ಸದಾಕಾಲ ದುಡಿಯುವ ದೇಹಗಳು
ಗಮ್ಮೆಂದು ಸುರಿಸುವ ಬೆವರು
ಅಮೃತಕೆ ಸಮಾನ

ದುಡಿತದ ಬೆವರಿನಲಿ ವಿದ್ಯುತ್‌ ಸಂಚಾರವಿದೆ
ನಿರಂಕುಶ ಮನವಿದೆ ದಣಿವಿದೆ ರುಚಿಯಿದೆ
ಹೊಸದಿಟ್ಟ ಹೆಜ್ಜೆಯಿದೆ ಹೊಸ ಹುರುಪಿದೆ
ಹಾಡುಗಳಿವೆ ದನಿಯಿದೆ ಹೊಸ ಬೆಳಕಿದೆ
ಬೆವರಿಂದಲೇ ಹುಟ್ಟಿದವು ವಿವಿಧ ಹೋರಾಟಗಳು

ಶತಶತಮಾನಗಳಿಂದ
ವೈಭವದಿಂದ ಉಣ್ಣುತ್ತಾ ಢೇಕರಿಸುತ್ತಾ ಬಂದವರ
ಬೆವರೇ ನಿಜ ಬೆವರೆಂದು ನಂಬಿಸಿ
ಮತ್ತೊಬ್ಬರ ಸಮಾಧಿ ಮೇಲೆ
ಸೌಧ ಕಟ್ಟುವವರೇ ಹೆಚ್ಚು

ಏಸಿ ರೂಮಿನಲಿ ಕುಳಿತ ಇವರು
ತಮ್ಮ ಬೆವರಿನ ಜಲ ರಂದ್ರಗಳಿಗೆ
ವಿವಿಧ ಬಗೆಯ ಅತ್ತರು ಲೋಶನ್‌ಗಳು
ಸೆಂಟ್‌ಗಳನ್ನು ಜಡೆದು ತುಂಬಿ
ಬೆವರ ಬೆಲೆ ಕಳೆದವರು

ಬೆವರ ಪರಂಪರೆಗೆ ಕಿಚ್ಚು ಇಟ್ಟವರು
ಇವರು ಬೆವರುಗಳ್ಳರು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...