Home / ಕವನ / ಕವಿತೆ / ಬೆವರುಗಳ್ಳರು

ಬೆವರುಗಳ್ಳರು

ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ.
ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ.
ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ.

ಬೆವರದಿದ್ದರೆ-
ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು
ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು
ಮನಕ್ಕೆ ಆನಂದ ಸಿಗಲಾರದು

ಈ ಬೆವರ ಹನಿಗಳು ಅಡೆತಡೆಯಿಲ್ಲದೆ
ಹರಿದು ತಾವು ನಡೆದಾಡುವ ನೆಲವ ನೆನೆಸಿ
ತಂಪುಗೊಳಿಸಿ ಫಲವು ಫಲಿಸಿ
ಮತ್ತೊಬ್ಬರ ಮನವ ತಣಿಸುತಿರೆ….

ಇನ್ನು ಕೆಲವರಲ್ಲಿ ಹೊರ ಬರದ ಬೆವರು
ಒಳಗೊಳಗೆ ಹೆಪ್ಪು ಗಟ್ಟಿ ಮಲಗಿರಲು
ಇಂತಹವರು ಬದುಕನ್ನು
ತಮ್ಮ ಬೆವರಿನಲ್ಲಿ ತೇಲಿಸಲಾರರು
ಬೇರೆಯವರ ಬೆವರಿನಲ್ಲಿ ಅಟ್ಟಹಾಸದಿಂದ
ಕೇಕೆ ಹಾಕಿ ಕುಣಿಯುತ್ತಾರೆ ಬದುಕುತ್ತಾರೆ ಕೂಡ

ಈ ದೇಹದಲ್ಲಿ ರಕ್ತ ಬೆವರು ಬೇರೆ ಬೇರೆ
ಶುದ್ಧ ರಕ್ತಕೆ ಸುರಿಯಲೇಬೇಕು ಬೆವರು ಹೊರಗೆ
ಎಷ್ಟೋ ಜನ ಗುಲಾಮರು ಕೂಲಿ ಕಾರ್ಮಿಕರು ರೈತರು
ಬೆವರುವುದೇ ಬದುಕೆಂದು ತಿಳಿದು
ಅದರಲ್ಲೇ ಹೂತು ಹೋಗಿದ್ದಾರೆ

ಒಂದು ಚೂರು ಬೆವರದ ದೇವರು
ಬ್ರಹ್ಮಜ್ಞಾನಿಗಳೂ ಏಸಿ ರೂಮಿನಲ್ಲಿ ಕುಳಿತವರು
ರಾಜಕೀಯ ಮಂದಿಗಳಿಗೇನು ತಿಳಿದೀತು
ಬೆವರ ಮಹಿಮೆ ಬೆವರ ಬೆಲೆ

ಬೆವರ ಸುರಿಸದವರು ಸೃಷ್ಟಿಸಿದ ಧರ್ಮಗ್ರಂಥಗಳು
ಬೆವರ ಹನಿಗಳಿಗೆ ನೇಣಾದವು ಕುಣಿಕೆಯಾದವು
ಅನ್ನ ಸೃಷ್ಟಿಸುವ ಸದಾಕಾಲ ದುಡಿಯುವ ದೇಹಗಳು
ಗಮ್ಮೆಂದು ಸುರಿಸುವ ಬೆವರು
ಅಮೃತಕೆ ಸಮಾನ

ದುಡಿತದ ಬೆವರಿನಲಿ ವಿದ್ಯುತ್‌ ಸಂಚಾರವಿದೆ
ನಿರಂಕುಶ ಮನವಿದೆ ದಣಿವಿದೆ ರುಚಿಯಿದೆ
ಹೊಸದಿಟ್ಟ ಹೆಜ್ಜೆಯಿದೆ ಹೊಸ ಹುರುಪಿದೆ
ಹಾಡುಗಳಿವೆ ದನಿಯಿದೆ ಹೊಸ ಬೆಳಕಿದೆ
ಬೆವರಿಂದಲೇ ಹುಟ್ಟಿದವು ವಿವಿಧ ಹೋರಾಟಗಳು

ಶತಶತಮಾನಗಳಿಂದ
ವೈಭವದಿಂದ ಉಣ್ಣುತ್ತಾ ಢೇಕರಿಸುತ್ತಾ ಬಂದವರ
ಬೆವರೇ ನಿಜ ಬೆವರೆಂದು ನಂಬಿಸಿ
ಮತ್ತೊಬ್ಬರ ಸಮಾಧಿ ಮೇಲೆ
ಸೌಧ ಕಟ್ಟುವವರೇ ಹೆಚ್ಚು

ಏಸಿ ರೂಮಿನಲಿ ಕುಳಿತ ಇವರು
ತಮ್ಮ ಬೆವರಿನ ಜಲ ರಂದ್ರಗಳಿಗೆ
ವಿವಿಧ ಬಗೆಯ ಅತ್ತರು ಲೋಶನ್‌ಗಳು
ಸೆಂಟ್‌ಗಳನ್ನು ಜಡೆದು ತುಂಬಿ
ಬೆವರ ಬೆಲೆ ಕಳೆದವರು

ಬೆವರ ಪರಂಪರೆಗೆ ಕಿಚ್ಚು ಇಟ್ಟವರು
ಇವರು ಬೆವರುಗಳ್ಳರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...