Home / ಕವನ / ಕವಿತೆ / ಬೆವರುಗಳ್ಳರು

ಬೆವರುಗಳ್ಳರು

ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ.
ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ.
ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ.

ಬೆವರದಿದ್ದರೆ-
ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು
ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು
ಮನಕ್ಕೆ ಆನಂದ ಸಿಗಲಾರದು

ಈ ಬೆವರ ಹನಿಗಳು ಅಡೆತಡೆಯಿಲ್ಲದೆ
ಹರಿದು ತಾವು ನಡೆದಾಡುವ ನೆಲವ ನೆನೆಸಿ
ತಂಪುಗೊಳಿಸಿ ಫಲವು ಫಲಿಸಿ
ಮತ್ತೊಬ್ಬರ ಮನವ ತಣಿಸುತಿರೆ….

ಇನ್ನು ಕೆಲವರಲ್ಲಿ ಹೊರ ಬರದ ಬೆವರು
ಒಳಗೊಳಗೆ ಹೆಪ್ಪು ಗಟ್ಟಿ ಮಲಗಿರಲು
ಇಂತಹವರು ಬದುಕನ್ನು
ತಮ್ಮ ಬೆವರಿನಲ್ಲಿ ತೇಲಿಸಲಾರರು
ಬೇರೆಯವರ ಬೆವರಿನಲ್ಲಿ ಅಟ್ಟಹಾಸದಿಂದ
ಕೇಕೆ ಹಾಕಿ ಕುಣಿಯುತ್ತಾರೆ ಬದುಕುತ್ತಾರೆ ಕೂಡ

ಈ ದೇಹದಲ್ಲಿ ರಕ್ತ ಬೆವರು ಬೇರೆ ಬೇರೆ
ಶುದ್ಧ ರಕ್ತಕೆ ಸುರಿಯಲೇಬೇಕು ಬೆವರು ಹೊರಗೆ
ಎಷ್ಟೋ ಜನ ಗುಲಾಮರು ಕೂಲಿ ಕಾರ್ಮಿಕರು ರೈತರು
ಬೆವರುವುದೇ ಬದುಕೆಂದು ತಿಳಿದು
ಅದರಲ್ಲೇ ಹೂತು ಹೋಗಿದ್ದಾರೆ

ಒಂದು ಚೂರು ಬೆವರದ ದೇವರು
ಬ್ರಹ್ಮಜ್ಞಾನಿಗಳೂ ಏಸಿ ರೂಮಿನಲ್ಲಿ ಕುಳಿತವರು
ರಾಜಕೀಯ ಮಂದಿಗಳಿಗೇನು ತಿಳಿದೀತು
ಬೆವರ ಮಹಿಮೆ ಬೆವರ ಬೆಲೆ

ಬೆವರ ಸುರಿಸದವರು ಸೃಷ್ಟಿಸಿದ ಧರ್ಮಗ್ರಂಥಗಳು
ಬೆವರ ಹನಿಗಳಿಗೆ ನೇಣಾದವು ಕುಣಿಕೆಯಾದವು
ಅನ್ನ ಸೃಷ್ಟಿಸುವ ಸದಾಕಾಲ ದುಡಿಯುವ ದೇಹಗಳು
ಗಮ್ಮೆಂದು ಸುರಿಸುವ ಬೆವರು
ಅಮೃತಕೆ ಸಮಾನ

ದುಡಿತದ ಬೆವರಿನಲಿ ವಿದ್ಯುತ್‌ ಸಂಚಾರವಿದೆ
ನಿರಂಕುಶ ಮನವಿದೆ ದಣಿವಿದೆ ರುಚಿಯಿದೆ
ಹೊಸದಿಟ್ಟ ಹೆಜ್ಜೆಯಿದೆ ಹೊಸ ಹುರುಪಿದೆ
ಹಾಡುಗಳಿವೆ ದನಿಯಿದೆ ಹೊಸ ಬೆಳಕಿದೆ
ಬೆವರಿಂದಲೇ ಹುಟ್ಟಿದವು ವಿವಿಧ ಹೋರಾಟಗಳು

ಶತಶತಮಾನಗಳಿಂದ
ವೈಭವದಿಂದ ಉಣ್ಣುತ್ತಾ ಢೇಕರಿಸುತ್ತಾ ಬಂದವರ
ಬೆವರೇ ನಿಜ ಬೆವರೆಂದು ನಂಬಿಸಿ
ಮತ್ತೊಬ್ಬರ ಸಮಾಧಿ ಮೇಲೆ
ಸೌಧ ಕಟ್ಟುವವರೇ ಹೆಚ್ಚು

ಏಸಿ ರೂಮಿನಲಿ ಕುಳಿತ ಇವರು
ತಮ್ಮ ಬೆವರಿನ ಜಲ ರಂದ್ರಗಳಿಗೆ
ವಿವಿಧ ಬಗೆಯ ಅತ್ತರು ಲೋಶನ್‌ಗಳು
ಸೆಂಟ್‌ಗಳನ್ನು ಜಡೆದು ತುಂಬಿ
ಬೆವರ ಬೆಲೆ ಕಳೆದವರು

ಬೆವರ ಪರಂಪರೆಗೆ ಕಿಚ್ಚು ಇಟ್ಟವರು
ಇವರು ಬೆವರುಗಳ್ಳರು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...