ಬೆವರುಗಳ್ಳರು

ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ.
ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ.
ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ.

ಬೆವರದಿದ್ದರೆ-
ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು
ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು
ಮನಕ್ಕೆ ಆನಂದ ಸಿಗಲಾರದು

ಈ ಬೆವರ ಹನಿಗಳು ಅಡೆತಡೆಯಿಲ್ಲದೆ
ಹರಿದು ತಾವು ನಡೆದಾಡುವ ನೆಲವ ನೆನೆಸಿ
ತಂಪುಗೊಳಿಸಿ ಫಲವು ಫಲಿಸಿ
ಮತ್ತೊಬ್ಬರ ಮನವ ತಣಿಸುತಿರೆ….

ಇನ್ನು ಕೆಲವರಲ್ಲಿ ಹೊರ ಬರದ ಬೆವರು
ಒಳಗೊಳಗೆ ಹೆಪ್ಪು ಗಟ್ಟಿ ಮಲಗಿರಲು
ಇಂತಹವರು ಬದುಕನ್ನು
ತಮ್ಮ ಬೆವರಿನಲ್ಲಿ ತೇಲಿಸಲಾರರು
ಬೇರೆಯವರ ಬೆವರಿನಲ್ಲಿ ಅಟ್ಟಹಾಸದಿಂದ
ಕೇಕೆ ಹಾಕಿ ಕುಣಿಯುತ್ತಾರೆ ಬದುಕುತ್ತಾರೆ ಕೂಡ

ಈ ದೇಹದಲ್ಲಿ ರಕ್ತ ಬೆವರು ಬೇರೆ ಬೇರೆ
ಶುದ್ಧ ರಕ್ತಕೆ ಸುರಿಯಲೇಬೇಕು ಬೆವರು ಹೊರಗೆ
ಎಷ್ಟೋ ಜನ ಗುಲಾಮರು ಕೂಲಿ ಕಾರ್ಮಿಕರು ರೈತರು
ಬೆವರುವುದೇ ಬದುಕೆಂದು ತಿಳಿದು
ಅದರಲ್ಲೇ ಹೂತು ಹೋಗಿದ್ದಾರೆ

ಒಂದು ಚೂರು ಬೆವರದ ದೇವರು
ಬ್ರಹ್ಮಜ್ಞಾನಿಗಳೂ ಏಸಿ ರೂಮಿನಲ್ಲಿ ಕುಳಿತವರು
ರಾಜಕೀಯ ಮಂದಿಗಳಿಗೇನು ತಿಳಿದೀತು
ಬೆವರ ಮಹಿಮೆ ಬೆವರ ಬೆಲೆ

ಬೆವರ ಸುರಿಸದವರು ಸೃಷ್ಟಿಸಿದ ಧರ್ಮಗ್ರಂಥಗಳು
ಬೆವರ ಹನಿಗಳಿಗೆ ನೇಣಾದವು ಕುಣಿಕೆಯಾದವು
ಅನ್ನ ಸೃಷ್ಟಿಸುವ ಸದಾಕಾಲ ದುಡಿಯುವ ದೇಹಗಳು
ಗಮ್ಮೆಂದು ಸುರಿಸುವ ಬೆವರು
ಅಮೃತಕೆ ಸಮಾನ

ದುಡಿತದ ಬೆವರಿನಲಿ ವಿದ್ಯುತ್‌ ಸಂಚಾರವಿದೆ
ನಿರಂಕುಶ ಮನವಿದೆ ದಣಿವಿದೆ ರುಚಿಯಿದೆ
ಹೊಸದಿಟ್ಟ ಹೆಜ್ಜೆಯಿದೆ ಹೊಸ ಹುರುಪಿದೆ
ಹಾಡುಗಳಿವೆ ದನಿಯಿದೆ ಹೊಸ ಬೆಳಕಿದೆ
ಬೆವರಿಂದಲೇ ಹುಟ್ಟಿದವು ವಿವಿಧ ಹೋರಾಟಗಳು

ಶತಶತಮಾನಗಳಿಂದ
ವೈಭವದಿಂದ ಉಣ್ಣುತ್ತಾ ಢೇಕರಿಸುತ್ತಾ ಬಂದವರ
ಬೆವರೇ ನಿಜ ಬೆವರೆಂದು ನಂಬಿಸಿ
ಮತ್ತೊಬ್ಬರ ಸಮಾಧಿ ಮೇಲೆ
ಸೌಧ ಕಟ್ಟುವವರೇ ಹೆಚ್ಚು

ಏಸಿ ರೂಮಿನಲಿ ಕುಳಿತ ಇವರು
ತಮ್ಮ ಬೆವರಿನ ಜಲ ರಂದ್ರಗಳಿಗೆ
ವಿವಿಧ ಬಗೆಯ ಅತ್ತರು ಲೋಶನ್‌ಗಳು
ಸೆಂಟ್‌ಗಳನ್ನು ಜಡೆದು ತುಂಬಿ
ಬೆವರ ಬೆಲೆ ಕಳೆದವರು

ಬೆವರ ಪರಂಪರೆಗೆ ಕಿಚ್ಚು ಇಟ್ಟವರು
ಇವರು ಬೆವರುಗಳ್ಳರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲೈಟ್ ಬಿಲ್
Next post ರಾತ್ರಿಯು ದಿವಸವಾದರೆ……

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys