Home / ಕವನ / ಕವಿತೆ / ಇದು ಬರಿ ನಾಡಲ್ಲೋ…

ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ
ಇದು ಬರಿ ನಾಡಲ್ಲೋ…||

ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು
ಹಲವು ಪ್ರಥಮಗಳ ವೈಭವದ ನಾಡು
ಕ್ರಾಂತಿಕಾರಕ ರೈತ ಚಳುವಳಿಗಳ ನಾಡು
ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು||

ಕುವೆಂಪು ಹಾಮಾನಾ ಮೂರ್ತಿ ತೇಜಸ್ವಿ ಜಿ‌ಎಸ್ಸೆಸ್‌
ಲಂಕೇಶ್‌ ಸುಬ್ಬಣ್ಣ ಶಾಂತವೇರಿ ಶಾಂತಲೆಯನಿತ್ತ ನಾಡು
ಪರಮದೇವ ದೇವತಾರಾಮಯ್ಯ ಲಿಂಗಣ್ಣ
ಕವಿ ವರೇಣ್ಯರು ಜನಿಸಿದ ನಾಡು ||

ಸ್ನೇಹ ಹಸ್ತವ ಚಾಚಿದ ವೀರಾಗ್ರಣಿ
ಕೆಳದಿ ಚೆನ್ನಮ್ಮನಾಳಿದ ನಾಡು
‘ಸಿಸ್ತು’ ತಂದ ಶಿಸ್ತಿನ ಶಿವಪ್ಪನಾಯಕನಾಳಿದ ನಾಡು
ಕೋಟೆ ಕೊತ್ತಲಗಳ ಶಿಲಾಶಾಸನಗಳ ಬೀಡು ||

ಸ್ವಾತಂತ್ರ್ಯ ಹೋರಾಟಗಾರರ ನೆಲೆವೀಡು
ಈ ಮಲೆನಾಡ ಚಪ್ಪರದಲಿ ಬಿಟ್ಟ ಕಾಯ್ಗಳನೇಕ
ನಾಲ್ವರು ಮುಖ್ಯಮಂತ್ರಿಗಳನ್ನಿತ್ತ ಹೆಮ್ಮೆಯ ನಾಡು
ಕರುನಾಡಿನಲಿ ಶಿಖರದಂತೆ ಮೆರೆತಿಹುದು ಈ ನಾಡು ||

ತುಂಗ ಭದ್ರೆ ಶರಾವತಿ
ಕುಮದ್ವತಿ ವರದೆ ಹರಿದಿಹ ನಾಡು
ಅಡಿಕೆ ತೆಂಗು ಜಾಗರವಾಡುವ ನಾಡು
ಸಿರಿ ಗಂಧದ ಕಂಪ ಸೂಸುವ ಬೀಡು ||

ರಾಜಾ ರಾಣಿ ರೋರರ್ ರಾಕೆಟ್
ನಾಲ್ಕು ಟಿಸಿಲಿನ ಘರ್ಜನೆಯ ರೋಮಾಂಚನ
ಚಲುವಿನ ಸಿರಿ ಜೋಗದ ಬೀಡು
ಈ ಜಗಕೆ ಬೆಳಕ ನೀಡಿದ ನಾಡು ||

ಸರ್‍ವಧರ್‍ಮಗಳ ಸಮನ್ವಯದ ಪ್ರತೀಕ ಈ ನಾಡು
ಕೈಗಾರಿಕೋದ್ಯಮ ಕಲರವದ ಬೀಡು
ಶಿಕ್ಷಣ ತಂತ್ರಜ್ಞಾನದಿ ನಲಿದಿಹ ನಾಡು
ಸಾಹಿತ್ಯ ಕಲೆ ಸಂಸ್ಕೃತಿ ಶಿಲ್ಪಕಲೆಗಳ ತವರೂರು ||

ಸಹ್ಯಾದ್ರಿ ಕೊಡಚಾದ್ರಿಯ ಸೆರಗಿನಲಿ
ಸಸ್ಯಶ್ಯಾಮಲೆಯಲ್ಲರಳಿದ ಈ ನಾಡು
ಪಕ್ಷಿ ಸಂಕುಲ ಸಿಂಹದಾಮ ಗುಡ್ಡಬೆಟ್ಟಗಳ ಸಾಲೇ ಸಾಲು
ಎತ್ತರೆತ್ತರ ಮರಗಿಡ ಬಳ್ಳಿ ಕೈಬೀಸಿ ಕರೆತಿಹವು ||
*****
೮-೧-೨೦೧೦ರಲ್ಲಿ ಶಿವಮೊಗ್ಗಾದ ಕ್ರಾಂತಿದೀಪ ಪತ್ರಿಕೆಯಲ್ಲಿ ಪ್ರಕಟ.
೯-೧-೨೦೧೦ರ ಸೃಷ್ಠಿರಾಜ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...