ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ
ಇದು ಬರಿ ನಾಡಲ್ಲೋ…||

ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು
ಹಲವು ಪ್ರಥಮಗಳ ವೈಭವದ ನಾಡು
ಕ್ರಾಂತಿಕಾರಕ ರೈತ ಚಳುವಳಿಗಳ ನಾಡು
ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು||

ಕುವೆಂಪು ಹಾಮಾನಾ ಮೂರ್ತಿ ತೇಜಸ್ವಿ ಜಿ‌ಎಸ್ಸೆಸ್‌
ಲಂಕೇಶ್‌ ಸುಬ್ಬಣ್ಣ ಶಾಂತವೇರಿ ಶಾಂತಲೆಯನಿತ್ತ ನಾಡು
ಪರಮದೇವ ದೇವತಾರಾಮಯ್ಯ ಲಿಂಗಣ್ಣ
ಕವಿ ವರೇಣ್ಯರು ಜನಿಸಿದ ನಾಡು ||

ಸ್ನೇಹ ಹಸ್ತವ ಚಾಚಿದ ವೀರಾಗ್ರಣಿ
ಕೆಳದಿ ಚೆನ್ನಮ್ಮನಾಳಿದ ನಾಡು
‘ಸಿಸ್ತು’ ತಂದ ಶಿಸ್ತಿನ ಶಿವಪ್ಪನಾಯಕನಾಳಿದ ನಾಡು
ಕೋಟೆ ಕೊತ್ತಲಗಳ ಶಿಲಾಶಾಸನಗಳ ಬೀಡು ||

ಸ್ವಾತಂತ್ರ್ಯ ಹೋರಾಟಗಾರರ ನೆಲೆವೀಡು
ಈ ಮಲೆನಾಡ ಚಪ್ಪರದಲಿ ಬಿಟ್ಟ ಕಾಯ್ಗಳನೇಕ
ನಾಲ್ವರು ಮುಖ್ಯಮಂತ್ರಿಗಳನ್ನಿತ್ತ ಹೆಮ್ಮೆಯ ನಾಡು
ಕರುನಾಡಿನಲಿ ಶಿಖರದಂತೆ ಮೆರೆತಿಹುದು ಈ ನಾಡು ||

ತುಂಗ ಭದ್ರೆ ಶರಾವತಿ
ಕುಮದ್ವತಿ ವರದೆ ಹರಿದಿಹ ನಾಡು
ಅಡಿಕೆ ತೆಂಗು ಜಾಗರವಾಡುವ ನಾಡು
ಸಿರಿ ಗಂಧದ ಕಂಪ ಸೂಸುವ ಬೀಡು ||

ರಾಜಾ ರಾಣಿ ರೋರರ್ ರಾಕೆಟ್
ನಾಲ್ಕು ಟಿಸಿಲಿನ ಘರ್ಜನೆಯ ರೋಮಾಂಚನ
ಚಲುವಿನ ಸಿರಿ ಜೋಗದ ಬೀಡು
ಈ ಜಗಕೆ ಬೆಳಕ ನೀಡಿದ ನಾಡು ||

ಸರ್‍ವಧರ್‍ಮಗಳ ಸಮನ್ವಯದ ಪ್ರತೀಕ ಈ ನಾಡು
ಕೈಗಾರಿಕೋದ್ಯಮ ಕಲರವದ ಬೀಡು
ಶಿಕ್ಷಣ ತಂತ್ರಜ್ಞಾನದಿ ನಲಿದಿಹ ನಾಡು
ಸಾಹಿತ್ಯ ಕಲೆ ಸಂಸ್ಕೃತಿ ಶಿಲ್ಪಕಲೆಗಳ ತವರೂರು ||

ಸಹ್ಯಾದ್ರಿ ಕೊಡಚಾದ್ರಿಯ ಸೆರಗಿನಲಿ
ಸಸ್ಯಶ್ಯಾಮಲೆಯಲ್ಲರಳಿದ ಈ ನಾಡು
ಪಕ್ಷಿ ಸಂಕುಲ ಸಿಂಹದಾಮ ಗುಡ್ಡಬೆಟ್ಟಗಳ ಸಾಲೇ ಸಾಲು
ಎತ್ತರೆತ್ತರ ಮರಗಿಡ ಬಳ್ಳಿ ಕೈಬೀಸಿ ಕರೆತಿಹವು ||
*****
೮-೧-೨೦೧೦ರಲ್ಲಿ ಶಿವಮೊಗ್ಗಾದ ಕ್ರಾಂತಿದೀಪ ಪತ್ರಿಕೆಯಲ್ಲಿ ಪ್ರಕಟ.
೯-೧-೨೦೧೦ರ ಸೃಷ್ಠಿರಾಜ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಲೆ
Next post ಗದ್ದೆ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys