ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ
ಇದು ಬರಿ ನಾಡಲ್ಲೋ…||

ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು
ಹಲವು ಪ್ರಥಮಗಳ ವೈಭವದ ನಾಡು
ಕ್ರಾಂತಿಕಾರಕ ರೈತ ಚಳುವಳಿಗಳ ನಾಡು
ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು||

ಕುವೆಂಪು ಹಾಮಾನಾ ಮೂರ್ತಿ ತೇಜಸ್ವಿ ಜಿ‌ಎಸ್ಸೆಸ್‌
ಲಂಕೇಶ್‌ ಸುಬ್ಬಣ್ಣ ಶಾಂತವೇರಿ ಶಾಂತಲೆಯನಿತ್ತ ನಾಡು
ಪರಮದೇವ ದೇವತಾರಾಮಯ್ಯ ಲಿಂಗಣ್ಣ
ಕವಿ ವರೇಣ್ಯರು ಜನಿಸಿದ ನಾಡು ||

ಸ್ನೇಹ ಹಸ್ತವ ಚಾಚಿದ ವೀರಾಗ್ರಣಿ
ಕೆಳದಿ ಚೆನ್ನಮ್ಮನಾಳಿದ ನಾಡು
‘ಸಿಸ್ತು’ ತಂದ ಶಿಸ್ತಿನ ಶಿವಪ್ಪನಾಯಕನಾಳಿದ ನಾಡು
ಕೋಟೆ ಕೊತ್ತಲಗಳ ಶಿಲಾಶಾಸನಗಳ ಬೀಡು ||

ಸ್ವಾತಂತ್ರ್ಯ ಹೋರಾಟಗಾರರ ನೆಲೆವೀಡು
ಈ ಮಲೆನಾಡ ಚಪ್ಪರದಲಿ ಬಿಟ್ಟ ಕಾಯ್ಗಳನೇಕ
ನಾಲ್ವರು ಮುಖ್ಯಮಂತ್ರಿಗಳನ್ನಿತ್ತ ಹೆಮ್ಮೆಯ ನಾಡು
ಕರುನಾಡಿನಲಿ ಶಿಖರದಂತೆ ಮೆರೆತಿಹುದು ಈ ನಾಡು ||

ತುಂಗ ಭದ್ರೆ ಶರಾವತಿ
ಕುಮದ್ವತಿ ವರದೆ ಹರಿದಿಹ ನಾಡು
ಅಡಿಕೆ ತೆಂಗು ಜಾಗರವಾಡುವ ನಾಡು
ಸಿರಿ ಗಂಧದ ಕಂಪ ಸೂಸುವ ಬೀಡು ||

ರಾಜಾ ರಾಣಿ ರೋರರ್ ರಾಕೆಟ್
ನಾಲ್ಕು ಟಿಸಿಲಿನ ಘರ್ಜನೆಯ ರೋಮಾಂಚನ
ಚಲುವಿನ ಸಿರಿ ಜೋಗದ ಬೀಡು
ಈ ಜಗಕೆ ಬೆಳಕ ನೀಡಿದ ನಾಡು ||

ಸರ್‍ವಧರ್‍ಮಗಳ ಸಮನ್ವಯದ ಪ್ರತೀಕ ಈ ನಾಡು
ಕೈಗಾರಿಕೋದ್ಯಮ ಕಲರವದ ಬೀಡು
ಶಿಕ್ಷಣ ತಂತ್ರಜ್ಞಾನದಿ ನಲಿದಿಹ ನಾಡು
ಸಾಹಿತ್ಯ ಕಲೆ ಸಂಸ್ಕೃತಿ ಶಿಲ್ಪಕಲೆಗಳ ತವರೂರು ||

ಸಹ್ಯಾದ್ರಿ ಕೊಡಚಾದ್ರಿಯ ಸೆರಗಿನಲಿ
ಸಸ್ಯಶ್ಯಾಮಲೆಯಲ್ಲರಳಿದ ಈ ನಾಡು
ಪಕ್ಷಿ ಸಂಕುಲ ಸಿಂಹದಾಮ ಗುಡ್ಡಬೆಟ್ಟಗಳ ಸಾಲೇ ಸಾಲು
ಎತ್ತರೆತ್ತರ ಮರಗಿಡ ಬಳ್ಳಿ ಕೈಬೀಸಿ ಕರೆತಿಹವು ||
*****
೮-೧-೨೦೧೦ರಲ್ಲಿ ಶಿವಮೊಗ್ಗಾದ ಕ್ರಾಂತಿದೀಪ ಪತ್ರಿಕೆಯಲ್ಲಿ ಪ್ರಕಟ.
೯-೧-೨೦೧೦ರ ಸೃಷ್ಠಿರಾಜ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಲೆ
Next post ಗದ್ದೆ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…