Home / ಕವನ / ಕವಿತೆ / ಇದು ಬರಿ ನಾಡಲ್ಲೋ…

ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ
ಇದು ಬರಿ ನಾಡಲ್ಲೋ…||

ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು
ಹಲವು ಪ್ರಥಮಗಳ ವೈಭವದ ನಾಡು
ಕ್ರಾಂತಿಕಾರಕ ರೈತ ಚಳುವಳಿಗಳ ನಾಡು
ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು||

ಕುವೆಂಪು ಹಾಮಾನಾ ಮೂರ್ತಿ ತೇಜಸ್ವಿ ಜಿ‌ಎಸ್ಸೆಸ್‌
ಲಂಕೇಶ್‌ ಸುಬ್ಬಣ್ಣ ಶಾಂತವೇರಿ ಶಾಂತಲೆಯನಿತ್ತ ನಾಡು
ಪರಮದೇವ ದೇವತಾರಾಮಯ್ಯ ಲಿಂಗಣ್ಣ
ಕವಿ ವರೇಣ್ಯರು ಜನಿಸಿದ ನಾಡು ||

ಸ್ನೇಹ ಹಸ್ತವ ಚಾಚಿದ ವೀರಾಗ್ರಣಿ
ಕೆಳದಿ ಚೆನ್ನಮ್ಮನಾಳಿದ ನಾಡು
‘ಸಿಸ್ತು’ ತಂದ ಶಿಸ್ತಿನ ಶಿವಪ್ಪನಾಯಕನಾಳಿದ ನಾಡು
ಕೋಟೆ ಕೊತ್ತಲಗಳ ಶಿಲಾಶಾಸನಗಳ ಬೀಡು ||

ಸ್ವಾತಂತ್ರ್ಯ ಹೋರಾಟಗಾರರ ನೆಲೆವೀಡು
ಈ ಮಲೆನಾಡ ಚಪ್ಪರದಲಿ ಬಿಟ್ಟ ಕಾಯ್ಗಳನೇಕ
ನಾಲ್ವರು ಮುಖ್ಯಮಂತ್ರಿಗಳನ್ನಿತ್ತ ಹೆಮ್ಮೆಯ ನಾಡು
ಕರುನಾಡಿನಲಿ ಶಿಖರದಂತೆ ಮೆರೆತಿಹುದು ಈ ನಾಡು ||

ತುಂಗ ಭದ್ರೆ ಶರಾವತಿ
ಕುಮದ್ವತಿ ವರದೆ ಹರಿದಿಹ ನಾಡು
ಅಡಿಕೆ ತೆಂಗು ಜಾಗರವಾಡುವ ನಾಡು
ಸಿರಿ ಗಂಧದ ಕಂಪ ಸೂಸುವ ಬೀಡು ||

ರಾಜಾ ರಾಣಿ ರೋರರ್ ರಾಕೆಟ್
ನಾಲ್ಕು ಟಿಸಿಲಿನ ಘರ್ಜನೆಯ ರೋಮಾಂಚನ
ಚಲುವಿನ ಸಿರಿ ಜೋಗದ ಬೀಡು
ಈ ಜಗಕೆ ಬೆಳಕ ನೀಡಿದ ನಾಡು ||

ಸರ್‍ವಧರ್‍ಮಗಳ ಸಮನ್ವಯದ ಪ್ರತೀಕ ಈ ನಾಡು
ಕೈಗಾರಿಕೋದ್ಯಮ ಕಲರವದ ಬೀಡು
ಶಿಕ್ಷಣ ತಂತ್ರಜ್ಞಾನದಿ ನಲಿದಿಹ ನಾಡು
ಸಾಹಿತ್ಯ ಕಲೆ ಸಂಸ್ಕೃತಿ ಶಿಲ್ಪಕಲೆಗಳ ತವರೂರು ||

ಸಹ್ಯಾದ್ರಿ ಕೊಡಚಾದ್ರಿಯ ಸೆರಗಿನಲಿ
ಸಸ್ಯಶ್ಯಾಮಲೆಯಲ್ಲರಳಿದ ಈ ನಾಡು
ಪಕ್ಷಿ ಸಂಕುಲ ಸಿಂಹದಾಮ ಗುಡ್ಡಬೆಟ್ಟಗಳ ಸಾಲೇ ಸಾಲು
ಎತ್ತರೆತ್ತರ ಮರಗಿಡ ಬಳ್ಳಿ ಕೈಬೀಸಿ ಕರೆತಿಹವು ||
*****
೮-೧-೨೦೧೦ರಲ್ಲಿ ಶಿವಮೊಗ್ಗಾದ ಕ್ರಾಂತಿದೀಪ ಪತ್ರಿಕೆಯಲ್ಲಿ ಪ್ರಕಟ.
೯-೧-೨೦೧೦ರ ಸೃಷ್ಠಿರಾಜ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...