ಎಂಥ ಚಂದದ
ಬಳ್ಳಿ ಬೆಳೆದಿಹುದಿಲ್ಲಿ
ಮೊಗ್ಗರಳಿ ಕನ್ನಡ
ಕಂಪು ಸೂಸುತಿಹುದಿಲ್ಲಿ
ತೊದಲು ನುಡಿಯಲಿ
ಪ್ರೀತಿಯೆಲ್ಲೆ ಮೀರಿಹುದಿಲ್ಲಿ
ಅವ್ವ ಅಪ್ಪ ಎಂದ್ಹೇಳಲು ಬಿಡದೆ
ಮಮ್ಮಿ ಡ್ಯಾಡಿ ಗೋ ಕಮ್ ಕಲಿಸಿ
ಚಿಗುರಿನ ಗೋಣ ಮುರಿವವರಿಲ್ಲಿ
ನಾಡು ನುಡಿಯ ಮೊಗ್ಗು
ಅರಳುವುದೆಂತು ಬಳ್ಳಿಯಲಿ
ವಿದ್ಯೆ ಕಲೆ ಸಂಸ್ಕೃತಿಯಲಿ
ಮೆರೆದಿಹ ನಾಡು
ಕನ್ನಡದ ಮೊಗ್ಗಿನ ಸೌಂದರ್ಯ
ಕನ್ನಡಿಗರಾಂತರ್ಯದಲ್ಲಿಹುದು
ಮನಕೊನರಿ ಸೆಟೆದು ನಿಂತರೆ
ಕನ್ನಡದ ಡಮರು ಮೊಳಗುವುದು
ಮಲ್ಲಿಗೀ ಮೊಗ್ಗುಗಳು
ಕನ್ನಡ ತಾಯ್ಗೊರಳ ಸರದಲಿ ಸಲುವವು
*****
೧-೯-೨೦೦೯ ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ
Related Post
ಸಣ್ಣ ಕತೆ
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…