Home / ಕವನ / ಕವಿತೆ / ಶ್ರಾವಣ ಬಂತೆಂದರೆ

ಶ್ರಾವಣ ಬಂತೆಂದರೆ

ಶ್ರಾವಣ ಮಾಸ ಬಂತೆಂದರೆ
ಸಿಗದು ಉಪಾಹಾರ ಜಳಕವಿಲ್ಲದೆ
ಎರಡು ದಿನಕ್ಕೊಮ್ಮೆ ಮಾಡುತ್ತಿದ್ದ ಜಳಕ
ನೀರಿಲ್ಲದಿದ್ದರೂ ಈಗ ದಿನವೂ ಜಳಕ

ದೇವರ ಪೂಜೆ ಮಾಡದಿದ್ದ ನಾನು
ಅವರ ಮೈ ತೊಳೆಯುವುದೀಗ ನನ್ನ ಸರದಿ

ಶ್ರಾವಣ ನೆಪದಲ್ಲಾದರೂ ಎಚ್ಚರಿಸುವಳು
ಮಾಡದ ತಪ್ಪಿಗೆ ಮನ್ನಿಸೆಂದು
ದೇವರಲ್ಲಿ ಬೇಡಿಕೊಳ್ಳಿ ಎಂದು

ಇಷ್ಟವಿಲ್ಲದಿದ್ದರೂ ಸಂಜೆ
ಬಿಡದೇ ಕರೆದೊಯ್ಯುವಳು ನನ್ನ
ದೇವಸ್ಥಾನಕೆ ಜೊತೆಯಲಿ

ಮುಗಿದರೂ ಶ್ರಾವಣ ಮಾಸ
ದೇವರಿಗೆ ಮಾಡಿಸುವಳು ಅಭಿಷೇಕ
ನನಗೆ ಮಾತ್ರ ನಿತ್ಯ ಅಭಿಷೇಕ
ಮಾಡಿ ದೇವರಿಗೆ ಪೂಜೆ ಎಂದು

ಶ್ರಾವಣ ಕಳೆಯುವ ತನಕ
ನಾನು ಪಕ್ಕಾ ಬ್ರಹ್ಮಚಾರಿ ಗೊತ್ತಾ!

ಆದರೂ
ಬಂತೆಂದರೆ ಶ್ರಾವಣ
ನನಗದೇನೋ ಸಂಭ್ರಮ ಮಹದಾನಂದ

ಮಾಡುವಳು ರುಚಿ ರುಚಿ ಅಡುಗೆ
ಬಗೆ ಬಗೆ ತಿಂಡಿ ತಿನಿಸು
ಕಡುಬು ಪಾಯಸ ಖೀರು ಕೋಸುಂಬರಿ
ನಾ ತಿನ್ನುವೆ ಚಪ್ಪರಿಸಿ

ಕೈ ಬಳೆ ಸದ್ದಿನಲಿ ಮಾಡಿದಡುಗೆ
ಘಮ-ಘಮಿಸುತಲಿ
ಅದೇನೋ ಪರಿಮಳದಾಕರ್ಷಣೆ ಅದರಲಿ

ಓರೆಗಣ್ಣಿನಲಿ ನೋಡುತ ಪ್ರೀತಿಯಲಿ
ಬಡಿಸಿದರೆ ಪಾಯಸದ ರುಚಿ ಸಿಗದು ಬೇರೆಲ್ಲೂ

ಅವಳ ನಡಿಗೆಯ ಗೆಜ್ಜೆಯ ಸಪ್ಪಳದಲಿ
ಸಿರಿಲಕ್ಷ್ಮಿ ಇಲ್ಲೆಂದೆನಿಸದಿರದು ಮನೆಯಲಿ

ನನಗದು ಕೋಟಿ ರುಪಾಯಿಗೂ ಮಿಗಿಲು
*****
೫-೯-೨೦೧೦ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...