Home / ಕವನ / ಕವಿತೆ / ಶ್ರಾವಣ ಬಂತೆಂದರೆ

ಶ್ರಾವಣ ಬಂತೆಂದರೆ

ಶ್ರಾವಣ ಮಾಸ ಬಂತೆಂದರೆ
ಸಿಗದು ಉಪಾಹಾರ ಜಳಕವಿಲ್ಲದೆ
ಎರಡು ದಿನಕ್ಕೊಮ್ಮೆ ಮಾಡುತ್ತಿದ್ದ ಜಳಕ
ನೀರಿಲ್ಲದಿದ್ದರೂ ಈಗ ದಿನವೂ ಜಳಕ

ದೇವರ ಪೂಜೆ ಮಾಡದಿದ್ದ ನಾನು
ಅವರ ಮೈ ತೊಳೆಯುವುದೀಗ ನನ್ನ ಸರದಿ

ಶ್ರಾವಣ ನೆಪದಲ್ಲಾದರೂ ಎಚ್ಚರಿಸುವಳು
ಮಾಡದ ತಪ್ಪಿಗೆ ಮನ್ನಿಸೆಂದು
ದೇವರಲ್ಲಿ ಬೇಡಿಕೊಳ್ಳಿ ಎಂದು

ಇಷ್ಟವಿಲ್ಲದಿದ್ದರೂ ಸಂಜೆ
ಬಿಡದೇ ಕರೆದೊಯ್ಯುವಳು ನನ್ನ
ದೇವಸ್ಥಾನಕೆ ಜೊತೆಯಲಿ

ಮುಗಿದರೂ ಶ್ರಾವಣ ಮಾಸ
ದೇವರಿಗೆ ಮಾಡಿಸುವಳು ಅಭಿಷೇಕ
ನನಗೆ ಮಾತ್ರ ನಿತ್ಯ ಅಭಿಷೇಕ
ಮಾಡಿ ದೇವರಿಗೆ ಪೂಜೆ ಎಂದು

ಶ್ರಾವಣ ಕಳೆಯುವ ತನಕ
ನಾನು ಪಕ್ಕಾ ಬ್ರಹ್ಮಚಾರಿ ಗೊತ್ತಾ!

ಆದರೂ
ಬಂತೆಂದರೆ ಶ್ರಾವಣ
ನನಗದೇನೋ ಸಂಭ್ರಮ ಮಹದಾನಂದ

ಮಾಡುವಳು ರುಚಿ ರುಚಿ ಅಡುಗೆ
ಬಗೆ ಬಗೆ ತಿಂಡಿ ತಿನಿಸು
ಕಡುಬು ಪಾಯಸ ಖೀರು ಕೋಸುಂಬರಿ
ನಾ ತಿನ್ನುವೆ ಚಪ್ಪರಿಸಿ

ಕೈ ಬಳೆ ಸದ್ದಿನಲಿ ಮಾಡಿದಡುಗೆ
ಘಮ-ಘಮಿಸುತಲಿ
ಅದೇನೋ ಪರಿಮಳದಾಕರ್ಷಣೆ ಅದರಲಿ

ಓರೆಗಣ್ಣಿನಲಿ ನೋಡುತ ಪ್ರೀತಿಯಲಿ
ಬಡಿಸಿದರೆ ಪಾಯಸದ ರುಚಿ ಸಿಗದು ಬೇರೆಲ್ಲೂ

ಅವಳ ನಡಿಗೆಯ ಗೆಜ್ಜೆಯ ಸಪ್ಪಳದಲಿ
ಸಿರಿಲಕ್ಷ್ಮಿ ಇಲ್ಲೆಂದೆನಿಸದಿರದು ಮನೆಯಲಿ

ನನಗದು ಕೋಟಿ ರುಪಾಯಿಗೂ ಮಿಗಿಲು
*****
೫-೯-೨೦೧೦ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...