Home / ಕವನ / ಕವಿತೆ / ಕಾಮನಬಿಲ್ಲು

ಕಾಮನಬಿಲ್ಲು

ಮಳೆ ಬಿಡುವು ಕೊಟ್ಟಿದೆ
ಬಿಸಿಲು ಬಿದ್ದಿದೆ ನೆಲ ಆರಿದೆ
ಹಿರಿ ಹಿರಿ ಹಿಗ್ಗಿ ಓಡಿದರು ಬಯಲಿಗೆ
ಕುಣಿ ಕುಣಿದು ಕುಪ್ಪಳಿಸಿದರು ಜತೆ ಜತೆಗೆ

ಮೋಡದ ತೆರೆ ಸರಿಯಿತು ಗಾಳಿಗೆ
ಕಂಡಿತು ಬಣ್ಣ ಬಣ್ಣದ ಮಳೆಬಿಲ್ಲು
ಏಳು ವರ್ಣಗಳ ಕಸೂತಿ ಬಾಗಿದ
ಬಿಂಕದ ನೋಟ ಬಲು ಸುಂದರ

ಆಯಿತು ಆಗಸಕ ತೋರಣ
ಎಷ್ಟೊಂದು ಆಕರ್ಷಣೆ ಈ ಕಂಕಣ
ಎಳೆಯರೆಲ್ಲ ಕಂಡರು ಹಿಗ್ಗಿನಲಿ
ವಿಸ್ಮಯಕೆ ನಿಂದರು ಬೆರಗಾಗುತಲಿ

ಮನದಲಿ ಕಾಡಿದವು ತಲ್ಲಣಗಳು ನೂರೆಂಟು
ಗೆಳೆಯರೆಲ್ಲ ಕೂಡಿ ನಲಿದರೇನುಂಟು
ಗುರುಗಳ ಬಳಿ ಓಡಿದರು ಅರ್‍ತಿಯಲಿ
ಪ್ರಶ್ನೆಗಳ ಕೇಳಿದರು ಕೌತುಕದಲಿ

ತುಂತುರು ಹನಿಗಳ ಸೀಳಿದ ಚಿತ್ತಾರ
ಬೆಳಕಿನ ವಿಕಿರಣಗಳ ಚಮತ್ಕಾರ
ಎಂಥ ಅದ್ಭುತ ಸೃಷ್ಟಿ ಎನಲು
ಬಿಟ್ಟರು ಕಣ್ಘಳ ಅಚ್ಚರಿಯಲಿ

ಮೂಡುವುದು ಬಿನ್ನಾಣ ಕಲ್ಯಾಣ
ಸೂರ್‍ಯನ ಎದುರು ದಿಕ್ಕಿನಲಿ
ಆಗಸದ ಕುಸುರಿಗೆ ಕಾರಣವು
ಬೆಳಕಿನ ವರ್‍ಣ ವಿಭಜನೆಯು

ಪ್ರಕೃತಿ ನಿಘಂಟಿನಲಿ
ಏನೆಲ್ಲ ವೈಚಿತ್ರ್ಯಗಳುಂಟು ಎನಲು
ಹೊಳೆಯಿತು ಮಿಂಚು ಎಲ್ಲರ ಕಣ್ಣಿನಲು
ತೇಲಿತು ನಗೆಯೊಂದು ಮಂದಹಾಸದಲಿ
*****
೧೧ ಮಾರ್ಚ್ ೨೦೧೦ ರ ಸುಧಾ ವಾರಪತ್ರಿಕೆಯ ಎಳೆಯರ ಅಂಗಳದಲ್ಲಿ ಪ್ರಕಟ.
೨-೫-೨೦೧೦ ರ ಪ್ರಜಾವಾಣಿಯ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...