Home / ಕವನ / ಕವಿತೆ / ಹಕ್ಕಿಗಳ ರೋದನ

ಹಕ್ಕಿಗಳ ರೋದನ

ಎಲ್ಲಿ ಹೋಗಲಿ ಹೇಗೆ ಬದುಕಲಿ
ಎಲ್ಲಿ ಹಾಡಲಿ ಎಲ್ಲಿ ನಲಿಯಲಿ
ನಮ್ಮ ಕನಸುಗಳಿಗೆ ಕಿಚ್ಚು ಇಟ್ಟರು
ಬದುಕಿನೊಂದಿಗೆ ಇವರ ಚೆಲ್ಲಾಟ

ಬಂಗಲೆಗಳಲ್ಲ ಅರಮನೆಗಳಲ್ಲ
ಪ್ರಕೃತಿಯೇ ನಮ್ಮ ಮಡಿಲು
ನಮ್ಮಷ್ಟಕ್ಕೆ ನಮ್ಮನ್ನು ಬಿಡಿ ಬದುಕಲು
ಕೇಳುವವರ್‍ಯಾರು ನಮ್ಮ ಆಕ್ರಂದನ

ಅಪ್ಪಚ್ಚಿಯಾದ ಮರಿಗಳೆಷ್ಟೋ
ಚೂರು ಚೂರಾದ ತತ್ತಿಗಳೆಷ್ಟೋ
ಗೂಡ ಕಟ್ಟಲೆಲ್ಲಿ ಮರಿ ಮಾಡಲೆಲ್ಲಿ?
ಎಲ್ಲಿ ಹಾಡಲಿ ಜೋಗುಳವ

ಹಸಿರುಸಿರೇ ನಮ್ಮ ಜೀವ
ಕುತ್ತು ತಂದರು ಪ್ರಾಣವಾಯುವಿಗೆ
ಬಂದಿತು ಸಂಚಕಾರ ನಮ್ಮ ನೆಲೆಗೆ
ಪರಿಸರವಾದಿಗಳಲ್ಲಿ ಅಡಗಿಹರು?

ಸಾಲು ಮರದ ತಿಮ್ಮಕ್ಕನೇ
ಬಾ ನೋಡಿಲ್ಲಿ-
ಕರಗಸ ಕತ್ತಿ ಕೊಡಲಿ
ಯಮದೂತರ ಅಟ್ಟಹಾಸ

ರಸ್ತೆ ಅಗಲೀಕರಣದಲಿ
ನಿತ್ಯ ನಡೆಸುತಿಹರು
ಸಾಲು ಮರಗಳ ಮಾರಣ ಹೋಮ
ಆಗುವುದು ಪ್ರಕೃತಿ ವಿಕೃತಿ

ಇನ್ನೆಲ್ಲಿಯ ಚಿಲಿಪಿಲಿ ಕಲರವ
ಬೆಳ್ಳಿಚುಕ್ಕಿ ಮೂಡುವುದೆಂತು
ಕನಸುಗಳ ಕಟ್ಟುವವರ್‍ಯಾರು?
ರೋದನವ ಕೇಳುವವರಾರು?
*****
೨೭ ಮೇ ೨೦೧೦ ರ ಸುಧಾದಲ್ಲಿನ ಎಳೆಯರ ಅಂಗಳದಲ್ಲಿ ಪ್ರಕಟ
೬-೬-೨೦೧೦ ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...