Home / ಕವನ / ಕವಿತೆ / ಹಕ್ಕಿಗಳ ರೋದನ

ಹಕ್ಕಿಗಳ ರೋದನ

ಎಲ್ಲಿ ಹೋಗಲಿ ಹೇಗೆ ಬದುಕಲಿ
ಎಲ್ಲಿ ಹಾಡಲಿ ಎಲ್ಲಿ ನಲಿಯಲಿ
ನಮ್ಮ ಕನಸುಗಳಿಗೆ ಕಿಚ್ಚು ಇಟ್ಟರು
ಬದುಕಿನೊಂದಿಗೆ ಇವರ ಚೆಲ್ಲಾಟ

ಬಂಗಲೆಗಳಲ್ಲ ಅರಮನೆಗಳಲ್ಲ
ಪ್ರಕೃತಿಯೇ ನಮ್ಮ ಮಡಿಲು
ನಮ್ಮಷ್ಟಕ್ಕೆ ನಮ್ಮನ್ನು ಬಿಡಿ ಬದುಕಲು
ಕೇಳುವವರ್‍ಯಾರು ನಮ್ಮ ಆಕ್ರಂದನ

ಅಪ್ಪಚ್ಚಿಯಾದ ಮರಿಗಳೆಷ್ಟೋ
ಚೂರು ಚೂರಾದ ತತ್ತಿಗಳೆಷ್ಟೋ
ಗೂಡ ಕಟ್ಟಲೆಲ್ಲಿ ಮರಿ ಮಾಡಲೆಲ್ಲಿ?
ಎಲ್ಲಿ ಹಾಡಲಿ ಜೋಗುಳವ

ಹಸಿರುಸಿರೇ ನಮ್ಮ ಜೀವ
ಕುತ್ತು ತಂದರು ಪ್ರಾಣವಾಯುವಿಗೆ
ಬಂದಿತು ಸಂಚಕಾರ ನಮ್ಮ ನೆಲೆಗೆ
ಪರಿಸರವಾದಿಗಳಲ್ಲಿ ಅಡಗಿಹರು?

ಸಾಲು ಮರದ ತಿಮ್ಮಕ್ಕನೇ
ಬಾ ನೋಡಿಲ್ಲಿ-
ಕರಗಸ ಕತ್ತಿ ಕೊಡಲಿ
ಯಮದೂತರ ಅಟ್ಟಹಾಸ

ರಸ್ತೆ ಅಗಲೀಕರಣದಲಿ
ನಿತ್ಯ ನಡೆಸುತಿಹರು
ಸಾಲು ಮರಗಳ ಮಾರಣ ಹೋಮ
ಆಗುವುದು ಪ್ರಕೃತಿ ವಿಕೃತಿ

ಇನ್ನೆಲ್ಲಿಯ ಚಿಲಿಪಿಲಿ ಕಲರವ
ಬೆಳ್ಳಿಚುಕ್ಕಿ ಮೂಡುವುದೆಂತು
ಕನಸುಗಳ ಕಟ್ಟುವವರ್‍ಯಾರು?
ರೋದನವ ಕೇಳುವವರಾರು?
*****
೨೭ ಮೇ ೨೦೧೦ ರ ಸುಧಾದಲ್ಲಿನ ಎಳೆಯರ ಅಂಗಳದಲ್ಲಿ ಪ್ರಕಟ
೬-೬-೨೦೧೦ ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...