Home / ಕವನ / ಕವಿತೆ / ಹಕ್ಕಿಗಳ ರೋದನ

ಹಕ್ಕಿಗಳ ರೋದನ

ಎಲ್ಲಿ ಹೋಗಲಿ ಹೇಗೆ ಬದುಕಲಿ
ಎಲ್ಲಿ ಹಾಡಲಿ ಎಲ್ಲಿ ನಲಿಯಲಿ
ನಮ್ಮ ಕನಸುಗಳಿಗೆ ಕಿಚ್ಚು ಇಟ್ಟರು
ಬದುಕಿನೊಂದಿಗೆ ಇವರ ಚೆಲ್ಲಾಟ

ಬಂಗಲೆಗಳಲ್ಲ ಅರಮನೆಗಳಲ್ಲ
ಪ್ರಕೃತಿಯೇ ನಮ್ಮ ಮಡಿಲು
ನಮ್ಮಷ್ಟಕ್ಕೆ ನಮ್ಮನ್ನು ಬಿಡಿ ಬದುಕಲು
ಕೇಳುವವರ್‍ಯಾರು ನಮ್ಮ ಆಕ್ರಂದನ

ಅಪ್ಪಚ್ಚಿಯಾದ ಮರಿಗಳೆಷ್ಟೋ
ಚೂರು ಚೂರಾದ ತತ್ತಿಗಳೆಷ್ಟೋ
ಗೂಡ ಕಟ್ಟಲೆಲ್ಲಿ ಮರಿ ಮಾಡಲೆಲ್ಲಿ?
ಎಲ್ಲಿ ಹಾಡಲಿ ಜೋಗುಳವ

ಹಸಿರುಸಿರೇ ನಮ್ಮ ಜೀವ
ಕುತ್ತು ತಂದರು ಪ್ರಾಣವಾಯುವಿಗೆ
ಬಂದಿತು ಸಂಚಕಾರ ನಮ್ಮ ನೆಲೆಗೆ
ಪರಿಸರವಾದಿಗಳಲ್ಲಿ ಅಡಗಿಹರು?

ಸಾಲು ಮರದ ತಿಮ್ಮಕ್ಕನೇ
ಬಾ ನೋಡಿಲ್ಲಿ-
ಕರಗಸ ಕತ್ತಿ ಕೊಡಲಿ
ಯಮದೂತರ ಅಟ್ಟಹಾಸ

ರಸ್ತೆ ಅಗಲೀಕರಣದಲಿ
ನಿತ್ಯ ನಡೆಸುತಿಹರು
ಸಾಲು ಮರಗಳ ಮಾರಣ ಹೋಮ
ಆಗುವುದು ಪ್ರಕೃತಿ ವಿಕೃತಿ

ಇನ್ನೆಲ್ಲಿಯ ಚಿಲಿಪಿಲಿ ಕಲರವ
ಬೆಳ್ಳಿಚುಕ್ಕಿ ಮೂಡುವುದೆಂತು
ಕನಸುಗಳ ಕಟ್ಟುವವರ್‍ಯಾರು?
ರೋದನವ ಕೇಳುವವರಾರು?
*****
೨೭ ಮೇ ೨೦೧೦ ರ ಸುಧಾದಲ್ಲಿನ ಎಳೆಯರ ಅಂಗಳದಲ್ಲಿ ಪ್ರಕಟ
೬-೬-೨೦೧೦ ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...