ಇಲ್ಲೇ ಇರುವೆ..

ಆಶೆ ಬಿಡು ಎಂದ ಬುದ್ಧ
ಏನು ಮಾಡಲಿ ನಾನಿಲ್ಲ ಸಿದ್ಧ.

ಬಯಸದೆ ಹುಟ್ಟಿ ಬಂದೆ
ಬಯಕೆಯ ಬುಟ್ಟಿಯಾದೆ

ಬುಟ್ಟಿಯನ್ನೇ ನೆಚ್ಚಿಕೊಂಡೆ
ಗಂಡ ಮಕ್ಕಳ ಹಚ್ಚಿಕೊಂಡೆ

ಬದುಕನ್ನ ಒಪ್ಪಿಕೊಂಡೆ
ಬೆಂಕಿಯನ್ನ ಅಪ್ಪಿಕೊಂಡೆ

ಆಶೆ ಬಿಡು ಎಂದ ಬುದ್ಧ
ಏನು ಮಾಡಲಿ ನಾ ಬದ್ಧ

ಸಂಸಾರ ಸಾಗರವಂತೆ
ದುಃಖದ ಆಗರವಂತೆ
ಇದ್ದೂ ಇಲ್ಲದಂತಿರಬೇಕಂತೆ
ನೀರೊಳಗಿನ ತಾವರೆ ಎಲೆಯಂತೆ

ಎಲ್ಲವ ತಿಳಿದೂ ತಿಳಿದೂ
ಇರುವೆ ಯಾಕೋ ಇನ್ನೂ ಸಾಕೆನಿಸಿಲ್ಲ ಗುರುವೆ

ನಾ ಪಡಕೊ ಬಂದದ್ದೇ ಈ ಸಂತೆ
ನಾನಿಲ್ಲೇ ಹೀಗೆ… ನಿಶ್ಚಿಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟೋಪಿ ಮಾರುತಿ
Next post ಛಿ! ನಾನೊಬ್ಬ ಕೃತಘ್ನಳು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys