Home / ಕವನ / ಕವಿತೆ / ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಇದ್ದ ಬುದ್ಧ
ರಾಮ, ಕೃಷ್ಣ, ಶಿವ, ಗಾಂಧಿ
ಅಂಬೇಡ್ಕರ್ ಅವರ ಜೊತೆಗೆ ಕುಳಿತಿದ್ದ.

ಮೊಂಡು ಕೈ, ಹರಿದ ಅಂಗವಸ್ತ್ರ….
ಬುದ್ಧ ಹೌದೋ ಅಲ್ಲವೋ ಎಂದು
ಅನುಮಾನಿಸುವಷ್ಟು ಚಿಂದಿಯಾಗಿದ್ದ.

ಆದರವೇ ಜಾಜ್ವಲ್ಯಮಾನ ಕಣ್ಣುಗಳು
ಸೆಳೆದವು, ಹೊಳೆದವು ಫಳ ಫಳ
ಪುಳಕಿತಳಾಗಿ ಮನೆಗೆ ಕರೆದೆ, ಬಂದ.

ಒಣಗಿದ ಹೂವು, ಆರಿದ ದೀಪ, ಪಿನ್ನು,
ಪುಸ್ತಕ, ಎಂಜಲು ತಟ್ಟೆ, ಒಣಗಿದ ಬಟ್ಟೆ,
ಹಣ್ಣು-ತರಕಾರಿಯ ಒತ್ತರಿಸಿ, ಅಂಗೈಯಲ್ಲಿ
ಗುಡಿಸಿ, ಸಾರಿಸಿ ಜಾಗ ಮಾಡಿಕೊಟ್ಟೆ-
ಮೇಜಿನ ಮೂಲೆಯಲಿ ಕೂತ.

ಅವನು ಬುದ್ಧ
ಮೈತ್ರಿ-ಕರುಣೆಯ ಸಾಕಾರ
ಅವನದೇ ಮಾತು: ಸಂಸಾರ ದುಃಖಸಾಗರ
ಆಶೆಯೇ ದುಃಖಕ್ಕೆ ಮೂಲ, ಜೀವನವು ನಶ್ವರ.

ಮಾರನಿಗೊಲಿದಿದ್ದ ನಾವು ಅವನ ಮುಂದೆಯೆ
ಶುರು ಹಚ್ಚಿಕೊಂಡೆವು ವ್ಯವಹಾರ
ಮನೆ ಮಂದಿಯ ಮೋಹ, ಮದ, ಮತ್ಸರ
ಆತಂಕ, ಆವೇಶ, ದುಃಖ, ಕೋಪ
ಎಲ್ಲವೂ ಈಗವನ ಸಮ್ಮುಖ!

ದೂಷಣೆ, ಶೋಷಣೆ, ಘೋಷಣೆ
ಯುದ್ಧ-ಕದನ ವಿರಾಮಗಳಿಗೆ-
ಅವನೇ ಸಾಕ್ಷಿ, ಅವನದೇ ರಾಯಭಾರ.
ರೋಗ ರುಜಿನ, ಮರಣ ಎಲ್ಲವುಗಳಿಗೆ
ಅವನೇ ಕಾರಣ, ಅವನಿಂದಲೇ ಶಮನ!

ಅಷ್ಟಾಂಗ ಮಾರ್ಗಗಳಿಗೆ ನಮಿಸಿದೆವು ನಿಜ,
ಆಚರಿಸಿದೆವೋ ಅನುಮಾನ!
ಏರಿದ ಎತ್ತರ, ಇಳಿದ ಪ್ರಪಾತ,
ಕವಿದ ಕಾರ್ಮೋಡ, ಕರಗಿದ ಕಾವಳ-
ಇಲ್ಲದೆಯೂ ಇದ್ದಂತೆ, ಜೊತೆಗಿದ್ದ….

ಇಪ್ಪತ್ತು ವರುಷವಾಯಿತು ಬುದ್ಧ
ನಮ್ಮಲ್ಲಿಗೆ ಬಂದು-
ನಮ್ಮೊಂದಿಗೇ ನಿಂದು, ನೊಂದು, ಬೆಂದು;
ಈಗವನು ನಮ್ಮವನು, ನಮ್ಮಲ್ಲೇ ಒಂದು.

ಇನಿತೂ ಬದಲಾಗಿಲ್ಲ….ಅದೇ
ಗುಂಡು ಮುಖ, ತುಂಡು ಬಾಯಿ
ಮೊಂಡು ಕೈ, ಹರಿದ ಅಂಗವಸ್ತ್ರ,
ಅದೇ ಮೌನ, ಸಮಾಧಾನ

ನಾವೂ ಅಷ್ಟೆ, ಇನಿತೂ ಬದಲಾಗಿಲ್ಲ!
ಅದೇ ವೇಗ, ಅದೇ ಭೋಗ,
ಅದೇ ತನ್ಹಾ….ಅದೇ ತಲ್ಲಣ!!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...